ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ಪಠ್ಯಕ್ರಮವನ್ನು ರಾಜ್ಯದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಸೋಮವಾರ ಇಲ್ಲಿ ಹೇಳಿದರು.
ವೈದ್ಯಕೀಯ ಶಿಕ್ಷಣದ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ ನಿಗದಿಪಡಿಸಿರುವ ಪಠ್ಯಕ್ರಮಕ್ಕೂ ಈಗ ರಾಜ್ಯದಲ್ಲಿರುವ ಪಠ್ಯಕ್ರಮಕ್ಕೂ ಭಾರಿ ವ್ಯತ್ಯಾಸ ಇದೆ. ಆ ಹಿನ್ನೆಲೆಯಲ್ಲಿ ಕನಿಷ್ಠ ಎರಡು ವರ್ಷ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್ಇಇಟಿ) ಮುಂದೂಡಿ ಎನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಇಟ್ಟಿರುವುದಾಗಿ ಅವರು ವಿವರಿಸಿದರು.
ಜಾನಪದ ವಿಶ್ವವಿದ್ಯಾಲಯದ ವೆಬ್ಸೈಟ್ ಮತ್ತು ಲಾಂಛನ ಬಿಡುಗಡೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ವೈದ್ಯಕೀಯ ಶಿಕ್ಷಣದ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ ನಿಗದಿಪಡಿಸಿರುವ ಪಠ್ಯಕ್ರಮಕ್ಕೂ ಈಗ ರಾಜ್ಯದಲ್ಲಿರುವ ಪಠ್ಯಕ್ರಮಕ್ಕೂ ಭಾರಿ ವ್ಯತ್ಯಾಸ ಇದೆ. ಆ ಹಿನ್ನೆಲೆಯಲ್ಲಿ ಕನಿಷ್ಠ ಎರಡು ವರ್ಷ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್ಇಇಟಿ) ಮುಂದೂಡಿ ಎನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಇಟ್ಟಿರುವುದಾಗಿ ಅವರು ವಿವರಿಸಿದರು.
ಜಾನಪದ ವಿಶ್ವವಿದ್ಯಾಲಯದ ವೆಬ್ಸೈಟ್ ಮತ್ತು ಲಾಂಛನ ಬಿಡುಗಡೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ರಾಷ್ಟ್ರಮಟ್ಟದ ಏಕರೂಪ ಪ್ರವೇಶ ಪರೀಕ್ಷೆಗೆ ರಾಜ್ಯ ಒಪ್ಪಿದೆ. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎರಡು ವರ್ಷಗಳ ಕಾಲಾವಕಾಶ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ಒಪ್ಪದಿದ್ದರೆ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಅವರು ವಿವರಿಸಿದರು.
2012ರ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಾಗೂ 2013ರಿಂದ ದ್ವಿತೀಯ ಪಿಯುಸಿಗೆ ರಾಷ್ಟ್ರೀಯ ವಿಜ್ಞಾನ ಪಠ್ಯಕ್ರಮ ಅಳವಡಿಸಲಾಗುವುದು. ರಾಜ್ಯ ಮತ್ತು ಕೇಂದ್ರ ಪಠ್ಯಕ್ರಮದ ನಡುವಿನ ಅಂತರ ಹೋಗಲಾಡಿಸದೇ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಒಪ್ಪಿಕೊಂಡರೆ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಇದನ್ನು ಕೇಂದ್ರ ಸರ್ಕಾರಕ್ಕೆ ಅರ್ಥ ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರ ಹೇಳುವಂತೆ ಇದೇ ವರ್ಷದಿಂದ ಹೊಸ ವ್ಯವಸ್ಥೆ ಅಳವಡಿಸಿಕೊಂಡರೆ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ತಯಾರಿಗೆ ಸಿಗುವ ಸಮಯ ಕೇವಲ 90 ದಿನ. ಈ ಸಮಯದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸುವುದು ಕಷ್ಟವಾಗುತ್ತದೆ ಎಂದ ಅವರು, ರಾಷ್ಟ್ರೀಯ ಮಟ್ಟದ ಸಿಇಟಿಯಿಂದ ರಾಜ್ಯಕ್ಕೂ ಲಾಭ ಇದೆ. ಶೇ 15ರಷ್ಟು ವೈದ್ಯಸೀಟುಗಳು ರಾಷ್ಟ್ರ ಮಟ್ಟದಲ್ಲಿಯೂ ಲಭ್ಯವಾಗುತ್ತವೆ ಎಂದರು.
ಹೊಸ ಪಠ್ಯಕ್ರಮದಿಂದ ಎದುರಾಗುವ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸಿದ್ಧ ಇದೆ. ಪಿಯುಸಿ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲು ಪ್ರಾಥಮಿಕ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಜತೆ ಚರ್ಚಿಸಲಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಪ್ರೌಢ ಶಿಕ್ಷಣದಿಂದಲೇ ಕೇಂದ್ರ ಪಠ್ಯಕ್ರಮ ಜಾರಿ ಕುರಿತು ಚಿಂತನೆ ನಡೆಸಲಾಗಿದೆ. ಪಿಯುಸಿ ಪಠ್ಯಕ್ರಮ ಬದಲಾದ ನಂತರ ಪ್ರೌಢಶಿಕ್ಷಣದ ಪಠ್ಯಕ್ರಮ ಬದಲಾವಣೆ ಕೂಡ ಅನಿವಾರ್ಯವಾಗಬಹುದು ಎಂದರು.
ಹೊಸ ಪಠ್ಯಕ್ರಮದಿಂದ ಎದುರಾಗುವ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸಿದ್ಧ ಇದೆ. ಪಿಯುಸಿ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲು ಪ್ರಾಥಮಿಕ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಜತೆ ಚರ್ಚಿಸಲಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಪ್ರೌಢ ಶಿಕ್ಷಣದಿಂದಲೇ ಕೇಂದ್ರ ಪಠ್ಯಕ್ರಮ ಜಾರಿ ಕುರಿತು ಚಿಂತನೆ ನಡೆಸಲಾಗಿದೆ. ಪಿಯುಸಿ ಪಠ್ಯಕ್ರಮ ಬದಲಾದ ನಂತರ ಪ್ರೌಢಶಿಕ್ಷಣದ ಪಠ್ಯಕ್ರಮ ಬದಲಾವಣೆ ಕೂಡ ಅನಿವಾರ್ಯವಾಗಬಹುದು ಎಂದರು.
See the thread in Prajavani
See the thread in Kannadaprabha
No comments:
Post a Comment