ಚಿತ್ರದುರ್ಗ: ಪದವಿ ಪೂರ್ವ ಕಾಲೇಜುಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ದೈಹಿಕ ಶಿಕ್ಷಕರನ್ನು ಸರ್ಕಾರ ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಜಿ.ಎಚ್. ತಿಪ್ಪಾರೆಡ್ಡಿ ಸಲಹೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಸ್ಆರ್ಎಸ್ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಸುಮಾರು 3,500 ಪದವಿ ಪೂರ್ವ ಕಾಲೇಜುಗಳಿವೆ. ಆದರೆ, ಸರ್ಕಾರಿ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರೇ ಇಲ್ಲ. ಖಾಸಗಿ ಕಾಲೇಜುಗಳಲ್ಲಿ ಮಾತ್ರ ದೈಹಿಕ ಶಿಕ್ಷಕರಿದ್ದಾರೆ. ದೈಹಿಕ ಶಿಕ್ಷಕರಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಕ್ರೀಡೆಗಳ ಬಗ್ಗೆ ಮಾರ್ಗದರ್ಶನ ನೀಡುವವರು ಇಲ್ಲದಂತಾಗಿದೆ. ಸರ್ಕಾರ ದೈಹಿಕ ಶಿಕ್ಷಕರನ್ನು ನೇಮಿಸಬೇಕು ಮತ್ತು ದೈಹಿಕ ಶಿಕ್ಷಕರಿದ್ದರೆ ಮಾತ್ರ ಖಾಸಗಿ ಕಾಲೇಜುಗಳಿಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.
ಸಂಸತ್ತಿನಲ್ಲಿ ಕ್ರೀಡಾ ವಿಧೇಯಕವನ್ನು ಹೊಸದಾಗಿ ಮಂಡಿಸಲಾಗುತ್ತಿದೆ. ಈ ವಿಧೇಯಕದಿಂದ ಕ್ರೀಡಾ ಲೋಕಕ್ಕೆ ಅನುಕೂಲವಾಗಬೇಕು ಎಂದರು.
20ರವರೆಗೆ ಕ್ರೀಡಾಕೂಟ ನಡೆಯಲಿದ್ದು, ಕ್ರೀಡಾಪಟುಗಳಿಗೆ ಕಾಂಗ್ರೆಸ್ ಮುಖಂಡ ಪಿ. ಮೆಹಬೂಬ್ ಪಾಷಾ ಎರಡು ದಿನದ ಊಟದ ವ್ಯವಸ್ಥೆ ಮತ್ತು ಬಾಪೂಜಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಎಂ. ವೀರೇಶ್ ಒಂದು ದಿನದ ಊಟದ ವ್ಯವಸ್ಥೆ ಮಾಡಿದ್ದಾರೆ.
ಶಾಸಕ ಎಸ್.ಕೆ. ಬಸವರಾಜನ್, ಜಿ.ಪಂ. ಅಧ್ಯಕ್ಷ ಸಿ.ಮಹಾಲಿಂಗಪ್ಪ, ನಗರಸಭೆ ಅಧ್ಯಕ್ಷೆ ಸುನೀತಾ ಮಲ್ಲಿಕಾರ್ಜುನ್, ಹೆಚ್ಚುವರಿ ಜಿಲ್ಲಾಧಿಕಾರಿ ಎ.ಎಸ್. ನಿರ್ವಾಹಣಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್. ಬಸವರಾಜಪ್ಪ, ಎಸ್.ಆರ್. ಗಂಗಪ್ಪ, ಪಿ. ಶಿವಮೂರ್ತಿ ಮತ್ತಿತರರು ಹಾಜರಿದ್ದರು. ಡಾ. ಬಸವರಾಜ್ ಸೊಪ್ಪಿಮಠ ಸ್ವಾಗಸಿದರು.
See Today's Prajavani
http://www.prajavani.net/web/include/story.php?news=50884§ion=3&menuid=10
No comments:
Post a Comment