Tuesday, December 20, 2011

ಪ್ರೌಢಶಿಕ್ಷಣ ವಿಲೀನ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 7ನೇ ತರಗತಿವರೆಗೆ ನಡೆಯುತ್ತಿರುವ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿ ಪ್ರಾರಂಭಿಸುವುದರ ಜತೆಗೆ, 9ರಿಂದ ದ್ವಿತೀಯ ಪಿಯುಸಿವರೆಗಿನ ತರಗತಿಗಳನ್ನು ಒಟ್ಟಾಗಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

`ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಮೂಲಕ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲು ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಈ ಕ್ರಮ ಅನಿವಾರ್ಯ` ಎಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಶ್ರೀನಾಥ್ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

`ಖಾಸಗಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಈ ವ್ಯವಸ್ಥೆಯನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಬಗ್ಗೆ ವರದಿ ನೀಡಲು ಸರ್ಕಾರ ಎರಡು ಸಮಿತಿಗಳನ್ನು ರಚಿಸಲಿದೆ. ಕಾಲಮಿತಿಯೊಳಗೆ ವರದಿ ನೀಡಲು ಸಮಿತಿಗಳಿಗೆ ಸೂಚಿಸಲಾಗುವುದು. ವರದಿಯನ್ವಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ` ಎಂದು ಅವರು ತಿಳಿಸಿದರು.

`ಈ ವ್ಯವಸ್ಥೆ ಜಾರಿಗೆ ಕೇಂದ್ರದಿಂದ ಬಹಳ ಒತ್ತಡವಿದೆ. ಬೇರೆ ರಾಜ್ಯಗಳು ಕೂಡ ಈ ಪದ್ಧತಿಯನ್ನು ಅನುಸರಿಸುತ್ತಿವೆ. ಕರ್ನಾಟಕವೂ ಕೇಂದ್ರದ ನಿಯಮಗಳನ್ನು ಪಾಲಿಸುವುದು ಅನಿವಾರ್ಯವಾಗಿದೆ. ಹೀಗಾಗಿ, ಇನ್ನು ಮುಂದೆ 1ರಿಂದ 5ರವರೆಗೆ ಕಿರಿಯ ಪ್ರಾಥಮಿಕ, 6ರಿಂದ 8ರವರೆಗೆ ಹಿರಿಯ ಪ್ರಾಥಮಿಕ ಹಾಗೂ 9ರಿಂದ 12ನೇ ತರಗತಿವರೆಗೆ ಪ್ರೌಢ ಶಿಕ್ಷಣವನ್ನಾಗಿ ಪರಿಗಣಿಸಲಾಗುವುದು` ಎಂದರು.

4233 ಹುದ್ದೆ ಖಾಲಿ: `ರಾಜ್ಯದಲ್ಲಿನ 2409 ಸರ್ಕಾರಿ ಪ್ರೌಢಶಾಲೆಗಳಲ್ಲಿ 435 ದೈಹಿಕ ಶಿಕ್ಷಕರ ಹುದ್ದೆಗಳೂ ಸೇರಿದಂತೆ ಒಟ್ಟು 4233 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ಉನ್ನತೀಕರಿಸಿದ ಶಾಲೆಗಳಲ್ಲಿ 1824 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ. ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು` ಎಂದು ಸಚಿವರು ತಿಳಿಸಿದರು.

ದೈಹಿಕ ಶಿಕ್ಷಣ ಅಧಿಕಾರಿಗಳು ಹಾಗೂ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವ ಸಂಬಂಧ ಸರ್ಕಾರ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಿ, ಇಲಾಖೆಯ ಸಮಗ್ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಅಂತಿಮಗೊಳಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿ ಅಂತಿಮಗೊಳಿಸಿದ ನಂತರ ವೃಂದ, ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದು ಸಚಿವರು ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿದರು.

ದೈಹಿಕ ಶಿಕ್ಷಣ ವಿಭಾಗದಲ್ಲಿ ಸುಧಾರಣೆ ತರುವ ಸಂಬಂಧ ಸರ್ಕಾರ ಪ್ರೊ. ವೈದ್ಯನಾಥನ್ ಸಮಿತಿ ವರದಿಯನ್ನು ಒಪ್ಪಿದೆ. ಅದರಂತೆ, 2009-10ನೇ ಶೈಕ್ಷಣಿಕ ಸಾಲಿನಿಂದ 6, 7, 8 ಮತ್ತು 9ನೇ ತರಗತಿಗೆ ಪ್ರಥಮ ಹಂತದಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಪಠ್ಯಕ್ರಮ ಜಾರಿಗೊಳಿಸಲಾಗಿದೆ. ಮುಂದಿನ ಸಾಲಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗೂ ಈ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದರು.

Click on this link Prajavani news

ಪಿ ಯು ಪ್ರವೇಶಕ್ಕೆ ಇನ್ನು ಕವ್ನ್ಸೆಲಿ೦ಗ್ - Read at Kannadaprabha




Read the following thread
http://www.kannadaprabha.com/NewsItems.asp?ID=KPH20111220002948&Title=Headlines&lTitle=%AE%DA%C3%A8%DB%AB%DA+%D1%DA%DF%A6%A7&Topic=0&ndate=12/20/2011&Dist=0

Sunday, December 11, 2011

ಬೆದರಿಕೆಗೆ ಬಗ್ಗೆವು-ಉಪನ್ಯಾಸಕರ ಸ೦ಘ ವಿಜಯಕರ್ನಾಟಕ ವಾರ್ತೆ

See today's Vijayakarnataka News paper 11.12.2011

ಕಾಲೇಜಿಗೆ ಹಾಜರಾಗದಿದ್ದರೆ ಶಿಸ್ತು ಕ್ರಮ: ಶಿಕ್ಷಣ ಸಚಿವ ಕಾಗೇರಿ ಎಚ್ಚರಿಕೆ

ಶಿರಸಿ: `ವೇತನ ತಾರತಮ್ಯ ನಿವಾರಿಸುವಂತೆ ಒತ್ತಾಯಿಸಿ ತರಗತಿ ಬಹಿಷ್ಕರಿಸಿರುವ ಪದವಿಪೂರ್ವ ಕಾಲೇಜು ಅಧ್ಯಾಪಕರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೇ 12ರಿಂದ (ಸೋಮವಾರ) ತರಗತಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಕೈಕೊಳ್ಳಲಿದೆ` ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಇಲ್ಲಿ ಎಚ್ಚರಿಸಿದರು.

ಬೆಂಗಳೂರಿನಲ್ಲಿ ಪದವಿಪೂರ್ವ ಕಾಲೇಜು ಅಧ್ಯಾಪಕರ ಸಂಘದ ಪ್ರಮುಖರ ಜೊತೆ ಶುಕ್ರವಾರ ನಡೆಸಿದ ಸಭೆಯಲ್ಲೂ ಈ ವಿಷಯವನ್ನು ಸ್ಪಷ್ಟಪಡಿಸಲಾಗಿದೆ. ಸಂಘಟನೆಯ ಪದಾಧಿಕಾರಿಗಳು ಮಾತುಕತೆ ನಡೆಸಿ ಸೋಮವಾರದೊಳಗೆ ತರಗತಿ ನಡೆಯುವ ವಾತಾವರಣ ನಿರ್ಮಿಸಲಿ. ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆ ನಡೆಯುವುದರಿಂದ ಪಾಲಕರಿಗೆ ಮಕ್ಕಳ ಭವಿಷ್ಯದ ಆತಂಕ ಎದುರಾಗಿದೆ. ಶಿಕ್ಷಕರಿಂದ ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬುದು ಸರ್ಕಾರ ಹಾಗೂ ಪಾಲಕರ ಅಪೇಕ್ಷೆಯಾಗಿದೆ` ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪ.ಪೂ. ಕಾಲೇಜು ಅಧ್ಯಾಪಕರು ಮತ್ತು ಪದವಿ ಕಾಲೇಜು ಅಧ್ಯಾಪಕರ ವೇತನಕ್ಕೆ ಹೋಲಿಸಿದರೆ ಭಾರಿ ತಾರತಮ್ಯ ಇದೆ ಎಂದು ಪಿಯು ಅಧ್ಯಾಪಕರು ಮೂರು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ಸಮಸ್ಯೆ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಮುಂದುವರಿದಿದೆ. ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಕಾರ್ಯದರ್ಶಿ ನೇತೃತ್ವದ ಸಮಿತಿ ರಚಿಸಿ ಸಮಿತಿ ವರದಿಯನ್ನು ವೇತನ ಸಮಿತಿಗೆ ಈಗಾಗಲೇ ಸಲ್ಲಿಸಿದೆ. ವೇತನ ಸಮಿತಿ ಮಾರ್ಚ್ ಒಳಗಾಗಿ ಪರಿಷ್ಕೃತ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದೆ. ವರದಿಯನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತದೆ. ಶಿಕ್ಷಕರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಮುಖ್ಯಮಂತ್ರಿ ಸದಾನಂದ ಗೌಡ ಸಹ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ. ಪದವಿಪೂರ್ವ ಅಧ್ಯಾಪಕರಿಗೆ ಮಾತ್ರವಲ್ಲ, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೂ ವೇತನದಲ್ಲಿ ತಾರತಮ್ಯ ಆಗಿದೆ. ಹೀಗಾಗಿ ಆತುರದ ನಿರ್ಣಯ ಕೈಕೊಳ್ಳುವ ಸಂದರ್ಭ ಇದಲ್ಲ ಎಂದು ಅವರು ತಿಳಿಸಿದರು.

`ವಿಧಾನಸಭೆ ಅಧಿವೇಶನದ ವೇಳೆಯಲ್ಲಿ ನಡೆಯುತ್ತಿರುವ ಈ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಅನೇಕರು ಹೇಳುತ್ತಿದ್ದಾರೆ. ನಾನು ಅದನ್ನು ಒಪ್ಪಿಲ್ಲ. ಆದರೆ ಅಧ್ಯಾಪಕರು ಇದೇ ಪ್ರವೃತ್ತಿ ಮುಂದುವರಿಸಿದರೆ ಸಮಾಜದಲ್ಲಿ ರಾಜಕೀಯ ಪ್ರೇರಿತ ಎಂಬ ಭಾವನೆ ಬರುತ್ತದೆ` ಎಂದು ಕಾಗೇರಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Prajavani Dialy dated 11.12.2011

Wednesday, December 07, 2011

ನಾಳೆ ಕಪ್ಪು ಪಟ್ಟಿ ಧರಿಸಿ ಶಿಕ್ಷಕರಿಂದ ಸರ್ಕಾರಕ್ಕೆ ಪಾಠ - ಕನ್ನಡ ಪ್ರಭ ವಾರ್ತೆ

Read the full story by clicking on this thread

Kannadaprabha dialy 07.12.2011

ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಬೋಧಿಸಲು ಹಾಗೂ ತರಬೇತಿ ನೀಡಲು ಪ್ರತ್ಯೇಕವಾಗಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ!

ದಾವಣಗೆರೆ: ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಬೋಧಿಸಲು ಹಾಗೂ ತರಬೇತಿ ನೀಡಲು ಪ್ರತ್ಯೇಕವಾಗಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ! ಇದರಿಂದಾಗಿ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವವರಲ್ಲಿ ಕ್ರೀಡೆಗಳಲ್ಲಿ ಆಸಕ್ತಿ ಇರುವ ಸಾವಿರಾರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ಸೌಲಭ್ಯ ದೊರೆಯುತ್ತಿಲ್ಲ.

ದೈಹಿಕ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ, ಕ್ರೀಡಾಪಟುಗಳಿಗೆ ಉತ್ತಮ ಮಾರ್ಗದರ್ಶನ ದೊರೆಯುವಂತಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿರುತ್ತದೆ. ಆದರೆ, ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಯನ್ನು ಕಲ್ಪಿಸುವುದಕ್ಕೆ ಕ್ರಮ ಕೈಗೊಂಡಿಲ್ಲ.

ರಾಜ್ಯದಲ್ಲಿ ತಾಲ್ಲೂಕು, ಹೋಬಳಿ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ (ಕೆಲವೆಡೆ ಹಳ್ಳಿಯಲ್ಲಿಯೂ) ಪ್ರಸ್ತುತ ಒಟ್ಟು 12,000 ಸರ್ಕಾರಿ ಪದವಿಪೂರ್ವ ಕಾಲೇಜುಗಳಿವೆ.

ಹಿಂದೆ, ಸಂಯುಕ್ತ ಪದವಿಪೂರ್ವ ಕಾಲೇಜುಗಳ ವ್ಯವಸ್ಥೆ ಇತ್ತು. ಆಗ, ಪ್ರೌಢಶಾಲೆಯ ದೈಹಿಕ ಶಿಕ್ಷಕರೇ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೂ ದೈಹಿಕ ಶಿಕ್ಷಣ ನೀಡುತ್ತಿದ್ದರು. ಈಚಿನ ವರ್ಷಗಳಲ್ಲಿ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳ ವ್ಯವಸ್ಥೆಯನ್ನು ಪ್ರತ್ಯೇಕಿಸಲಾಗಿದೆ. ಹೀಗಾಗಿ, ಪಿಯು ಕಾಲೇಜುಗಳಿಗೆ ದೈಹಿಕ ಶಿಕ್ಷಣ ಉಪನ್ಯಾಸಕರು ಇಲ್ಲದಂತಾಗಿದ್ದಾರೆ. ಇರುವ ಉಪನ್ಯಾಸಕರಿಂದಲೇ ದೈಹಿಕ ಶಿಕ್ಷಣದ ಕೆಲಸ ಮಾಡಿಸಲಾಗುತ್ತಿದೆ.

ಇದು, ಕೆಲ ಉಪನ್ಯಾಸಕರಿಗೆ `ಹೊರೆ`ಯಾದರೆ, ಕೆಲವರಿಗೆ `ಸಂಪೂರ್ಣ ಜ್ಞಾನವಿಲ್ಲದ ವಿದ್ಯೆ` ಕಲಿಸಿಕೊಡಬೇಕಾದ ಅನಿವಾರ್ಯತೆ! ಇದರಿಂದ ಅಂತಿಮವಾಗಿ ಕ್ರೀಡೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಪರಿಣಾಮ ಎದುರಿಸುವಂತಾಗಿದೆ.

ಖಾಸಗಿ ಕಾಲೇಜುಗಳಲ್ಲಿದ್ದಾರೆ!: ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಪಿಯು ಕಾಲೇಜುಗಳಲ್ಲಿ ಪ್ರತ್ಯೇಕ ದೈಹಿಕ ಶಿಕ್ಷಣ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ದೊರೆಯುತ್ತಿದೆ.

ಮಾದರಿಯಾಗಬೇಕಾದ ಸರ್ಕಾರ ಪಿಯು ಕಾಲೇಜುಗಳಲ್ಲಿಯೇ ದೈಹಿಕ ಶಿಕ್ಷಣ ಉಪನ್ಯಾಸಕರ ನೇಮಕಕ್ಕೆ ಮುಂದಾಗದೇ, ಬಡ ಪ್ರತಿಭಾವಂತರನ್ನು ವಂಚಿಸಿದಂತಾಗಿದೆ. ಸರ್ಕಾರಿ ಕಾಲೇಜುಗಳಿಗೆ ಬರುವ ಬಹುತೇಕರು ದಲಿತರು, ಹಿಂದುಳಿದ ವರ್ಗದವರು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಾಗಿರುತ್ತಾರೆ.

ನಗರ ಅಥವಾ ಪಟ್ಟಣದ ಪಿಯು ಕಾಲೇಜೊಂದರಲ್ಲಿ ವಿವಿಧ ವಿಭಾಗದಿಂದ 500 ವಿದ್ಯಾರ್ಥಿಗಳಿದ್ದರೆ, ಅದರಲ್ಲಿ 60ರಿಂದ 100 ಮಂದಿ ಕ್ರೀಡೆಗಳಲ್ಲಿ ಆಸಕ್ತಿ ಇರುವ ಪ್ರತಿಭೆಗಳಿರುತ್ತಾರೆ. ಅವರು ಸೂಕ್ತ ತರಬೇತಿ, ಮಾರ್ಗದರ್ಶನಕ್ಕಾಗಿ ಖಾಸಗಿ ಸಂಸ್ಥೆಗಳು, ಕೋಚ್‌ಗಳ ಬಳಿಗೆ ದುಬಾರಿ ಶುಲ್ಕ ನೀಡಿ ಹೋಗಬೇಕಾದ ಸ್ಥಿತಿ ಇದೆ. ಎಷ್ಟೋ ಬಡ ವಿದ್ಯಾರ್ಥಿಗಳಿಗೆ ಶುಲ್ಕ ತೆತ್ತು ತರಬೇತಿ ಹೊಂದಲು ಸಾಧ್ಯವಾಗುವುದಿಲ್ಲ. ಆಗ, ಪ್ರತಿಭೆ ಕಮರಿದಂತಾಗುತ್ತದೆ. ಇಂತಹ ಅನುಭವ ನೂರಾರು ಮಂದಿಗೆ ಆಗಿದೆ.

ಸರ್ಕಾರವೇ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಿಸಿದ್ದರೆ ಉಪಯೋಗವಾಗುತ್ತಿತ್ತು ಎನ್ನುತ್ತಾರೆ ಹೆಸರು ಬಹಿರಂಗಪಡಿಸಲಿಚ್ಛಿಸದ ಪ್ರಾಂಶುಪಾಲರೊಬ್ಬರು.

ಶೀಘ್ರದಲ್ಲೇ ಸಿಗಬಹುದು...: ಪ್ರೌಢಶಾಲೆಗಳ ಶಿಕ್ಷಕರಿಗೆ ಪದವಿಪೂರ್ವ ಕಾಲೇಜುಗಳಿಗೆ ಉಪನ್ಯಾಸಕರಾಗಿ ಬಡ್ತಿ ನೀಡುವಂತೆ, ಎಂಪಿಇಡಿ ಮಾಡಿಕೊಂಡಿರುವ ದೈಹಿಕ ಶಿಕ್ಷಕರಿಗೂ ಬಡ್ತಿ ಕಲ್ಪಿಸಬೇಕು ಎಂಬ ಒತ್ತಾಯ ಹಿಂದಿನಿಂದಲೂ ಕೇಳಿಬಂದಿದೆ. ಆದರೆ, ಇದರತ್ತಲೂ ಸರ್ಕಾರ ಗಮನ ಹರಿಸಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಪದವಿಪೂರ್ವ ಹಾಗೂ ವೃತ್ತಿಶಿಕ್ಷಣ ಇಲಾಖೆ ಉಪ ನಿರ್ದೇಶಕ ರುದ್ರಮುನಿ, `ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರತ್ಯೇಕ ದೈಹಿಕ ಶಿಕ್ಷಣ ಉಪನ್ಯಾಸಕರು ಇಲ್ಲದಿರುವುದು ನಿಜ. ನಾವು, ರಾಜ್ಯ ಮತ್ತು ಜಿಲ್ಲಾಮಟ್ಟದ ಕ್ರೀಡಾಕೂಟಗಳು ನಡೆದಾಗ ಇತರೆ ಕೋಚ್‌ಗಳನ್ನು ಬಳಸಿಕೊಳ್ಳುತ್ತಿದ್ದೇವೆ. ಇಲಾಖೆಯಲ್ಲಿ ನೂತನವಾಗಿ ಸಿ ಅಂಡ್ ಆರ್ (ವೃಂದ ಮತ್ತು ನೇಮಕಾತಿ) ನಿಯಮಾವಳಿ ಸಿದ್ಧಪಡಿಸಲಾಗುತ್ತಿದೆ. ಇದು ಜಾರಿಯಾದ ನಂತರ ಕಾಲೇಜುಗಳಿಗೆ ದೈಹಿಕ ಶಿಕ್ಷಣ ಉಪನ್ಯಾಸಕರು ದೊರೆಯುವ ನಿರೀಕ್ಷೆ ಇದೆ` ಎಂದು ತಿಳಿಸಿದರು.

ಪ್ರಜಾವಾಣಿ ವಾರ್ತೆ
  • November 04, 2011

ನಾಳೆಯಿಂದ ಉಪನ್ಯಾಸಕರ ಮುಷ್ಕರ !

ಬೆಂಗಳೂರು: ವೇತನ ತಾರತಮ್ಯ ನಿವಾರಣೆ ಸೇರಿದಂತೆ ಎಂಟು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಗುರುವಾರದಿಂದ ರಾಜ್ಯದಾದ್ಯಂತ ಅನಿರ್ದಿಷ್ಟ ಕಾಲ ತರಗತಿಗಳನ್ನು ಬಹಿಷ್ಕರಿಸಲಿದ್ದಾರೆ ಎಂದು ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ, ಸಮನ್ವಯ ಸಮಿತಿ ಸಂಚಾಲಕ ಎಸ್.ಎಚ್.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

To read this pls click on Prajavani 07.12.2011

8ರಿಂದ ಪದವಿಪೂರ್ವ ಕಾಲೇಜುಗಳಲ್ಲಿ ಅನಿರ್ದಿಷ್ಟ ಕಾಲ ತರಗತಿ ಬಹಿಷ್ಕಾರ

ರಾಯಚೂರು: ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆಗೆ ಹಲವು ವರ್ಷಗಳಿಂದ ಒತ್ತಾಯಿಸುತ್ತ ಬರಲಾಗಿದ್ದರೂ ಸರ್ಕಾರ ಗಮನಹರಿಸಿಲ್ಲ. ಈ ಹಿನ್ನೆಲೆಯಲ್ಲಿ ಇದೇ 8ರಿಂದ ಪದವಿಪೂರ್ವ ಕಾಲೇಜುಗಳಲ್ಲಿ ಅನಿರ್ದಿಷ್ಟ ಕಾಲ ತರಗತಿ ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಪ್ಪ ಭಂಡಾರಿ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 8ರಂದು ಕಾಲೇಜಿನ ಹಾಜರಾತಿಯಲ್ಲಿ ಸಹಿ ಮಾಡಿ ತರಗತಿಗಳನ್ನು ಬಹಿಷ್ಕರಿಸಿ ಕಾಲೇಜಿನ ಅವಧಿ ಮುಗಿಯುವವರೆಗೂ ಇರಲಾಗುತ್ತದೆ, 9ರಂದು ಸಾಮೂಹಿಕ ರಜೆ ಹಾಕಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮಧ್ಯಾಹ್ನ 12ಕ್ಕೆ ಮನವಿ ಸಲ್ಲಿಸಲಾಗುತ್ತದೆ. ಜಿಲ್ಲೆಯ ಅನುದಾನಿತ ಮತ್ತು ಅನುದಾನರಹಿತ ಸುಮಾರು 70 ಕಾಲೇಜಿನ 350ಕ್ಕೂ ಹೆಚ್ಚು ಉಪನ್ಯಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

8ರಿಂದ ತರಗತಿಗಳನ್ನು ಬಹಿಷ್ಕರಿಸಲಾಗುತ್ತದೆ. ಬೇಡಿಕೆ ಈಡೇರುವವರೆಗೂ ತರಗತಿಗಳನ್ನು ಉಪನ್ಯಾಸಕರು ತೆಗೆದುಕೊಳ್ಳುವುದಿಲ್ಲ. ಆಯಾ ತಾಲ್ಲೂಕು ಮಟ್ಟದಲ್ಲಿಯೂ ಇದೇ ರೀತಿ ಪ್ರತಿಭಟನೆಯನ್ನು ಉಪನ್ಯಾಸಕರು ಮುಂದುವರಿಸುವರು ಎಂದು ಹೇಳಿದರು.

ಕಾಲೇಜು ವಿದ್ಯಾರ್ಥಿಗಳ ಬಗ್ಗೆ, ಅವರ ಭವಿಷ್ಯದ ಬಗ್ಗೆ ಉಪನ್ಯಾಸಕ ವರ್ಗಕ್ಕೆ ಅಪಾರ ಕಳಕಳಿ ಇದೆ. ಈ ಬಗ್ಗೆ ಆತಂಕ ಪಾಲಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೇಡ. ಸರ್ಕಾರ ಬೇಡಿಕೆ ಈಡೇರಿಸಿದ ಬಳಿಕ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಂಡು ಪಠ್ಯಪಾಠ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

1-7-2055ರಿಂದ ಪೂರ್ವಾನ್ವಯವಾಗುವಂತೆ ಉಪನ್ಯಾಸಕರಿಗೆ 14,050 ರೂಪಾಯಿ, ಪ್ರಾಚಾರ್ಯರಿಗೆ 18,150 ಮೂಲವೇತನ ನಿಗದಿಪಡಿಸಬೇಕು, ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಉಪನ್ಯಾಸಕರಿಗೆ ಕಾಲ್ಪನಿಕ ವೇತನ ಬಡ್ತಿ ನೀಡಬೇಕು, ಎಂಫಿಲ್, ಪಿಎಚ್‌ಡಿ, ಎನ್‌ಇಟಿ, ಎಸ್‌ಇಟಿ ಪಾಸಾದ ಪಿಯುಸಿ ಉಪನ್ಯಾಸಕರಿಗೆ ವಿಶೇಷ ಬಡ್ತಿ ನೀಡಿ ಪದವಿ ಕಾಲೇಜುಗಳಿಗೆ ನೇಮಕ ಮಾಡಬೇಕು,

1995ರ ನಂತರದಲ್ಲಿ ಪ್ರಾರಂಭಗೊಂಡ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಅನುದಾನರಹಿತ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ಕನಿಷ್ಠ ವೇತನ ಜಾರಿಗೊಳಿಸುವ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಪದವಿ ಕಡ್ಡಾಯಗೊಳಿಸಿರುವುದನ್ನು ರದ್ದುಪಡಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ ಎಂದು ವಿವರಿಸಿದರು.

ಕಳೆದ ಏಪ್ರಿಲ್‌ನಲ್ಲಿ ಸಂಘವು ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ವೇತನ ತಾರತಮ್ಯ ಸರಿಪಡಿಸಲು ಹೋರಾಟ ಮಾಡಿತ್ತು. ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸಲು ಸರ್ಕಾರದಿಂದ ನೇಮಸಲ್ಪಟ್ಟ ಸಮಿತಿಗೆ 4ನೇ ಮತ್ತು 5ನೇ ವೇತನ ಆಯೋಗದಲ್ಲಿ ಆದ ಅನ್ಯಾಯವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಮನವಿ ಸಲ್ಲಿಸಲಾಗಿತ್ತು. ಅಲ್ಲದೇ ಜುಲೈ 11ರಂದು ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸಲು ಉದ್ದೇಶಿಸಲಾಗಿತ್ತು.

ಆದರೆ ಜೂನ್ 27ರಂದು ಅಧ್ಯಯನ ಸಮಿತಿಯು ವರದಿಯನ್ನು ಶಿಕ್ಷಣ ಸಚಿವರಿಗೆ ಅಧಿಕೃತವಾಗಿ ಸಲ್ಲಿಕೆ ಮಾಡಿತ್ತು. ಈ ವರದಿ ಸಲ್ಲಿಸಿದ ಬಳಿಕವೂ ಸರ್ಕಾರವು ಅನುಷ್ಠಾನಕ್ಕೆ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಸಮನ್ವಯ ಸಮಿತಿ ಜಂಟಿಯಾಗಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಾಸಾಬ್ ಅಂಗಡಿ, ಖಜಾಂಚಿ ಗೋವರ್ಧನರೆಡ್ಡಿ, ಅಮರೇಶ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.

To read this click on Prajavani 07.12.2011

8ರಿಂದ ರಾಜ್ಯಾದ್ಯಂತ ಅನಿರ್ದಿಷ್ಟ ಕಾಲ ತರಗತಿಗಳನ್ನು ಬಹಿಷ್ಕರಿಸಲಾಗುವುದು

ನೆಲಮಂಗಲ: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆಗೆ ಒತ್ತಾಯಿಸಿ ಈ ತಿಂಗಳ 8ರಿಂದ ರಾಜ್ಯಾದ್ಯಂತ ಅನಿರ್ದಿಷ್ಟ ಕಾಲ ತರಗತಿಗಳನ್ನು ಬಹಿಷ್ಕರಿಸಲು ರಾಜ್ಯ ಪದವಿ ಪೂರ್ವ ಕಾಲೇಜುಗಳ ವಿವಿಧ ಸಂಘಟನೆಗಳ ಸಮನ್ವಯ ಸಮಿತಿ ಕರೆ ನೀಡಿದೆ.

ಇಲ್ಲಿನ ಮುರಳಿ ಕಾಲೇಜಿನಲ್ಲಿ ಸೋಮವಾರ ಸಭೆ ಸೇರಿದ್ದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಸಂಘ ಮುಷ್ಕರಕ್ಕೆ ಬೆಂಬಲ ಸೂಚಿಸಲು ನಿರ್ಣಯಿಸಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪ್ರಕಾಶ್ ಮಾತನಾಡಿ, ಈ ಹಿಂದೆ ಮೌಲ್ಯಮಾಪನ, ಶಿಕ್ಷಕರ ದಿನಾಚರಣೆ ಬಹಿಷ್ಕಾರ, ಕಪ್ಪು ಬಟ್ಟೆ ಧರಿಸಿ ಜಾಥಾ ನಡೆಸಿದ್ದರ ಜೊತೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರ್ಕಾರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷಿಸಿದೆ.

ಈ ಹಿನ್ನೆಲೆಯಲ್ಲಿ ಈ ತಿಂಗಳ 8ರಂದು ತರಗತಿ ಬಹಿಷ್ಕರಿಸಿ ಕಾಲೇಜಿನ ಆವರಣದಲ್ಲಿ ಪ್ರತಿಭಟಿಸಲಾಗುವುದು. ಡಿ. 9ರಂದು ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಭೆ ಸೇರಿ ಜಿಲ್ಲಾಧಿಕಾರಿಗಳಿಗೆ ಸಮವಿ ಸಲ್ಲಿಸಲಾಗುವುದು. ಡಿ. 10ರಿಂದ ಕೇಂದ್ರ ಸಂಘದ ಸೂಚನೆ ಬರುವವರೆಗೂ ಅನಿರ್ದಿಷ್ಟಾವಧಿ ತರಗತಿಗಳನ್ನು ಬಹಿಷ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಪ್ರಾಂಶುಪಾಲರಾದ ಎ.ಎಸ್.ರಮಾನಂದ್, ಆರ್.ಪ್ರದೀಪ್‌ಕುಮಾರ್ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
To read this click on Prajavani 07.12.2011

ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸವಂತೆ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಮೇಲೆ ಒತ್ತಡ ಹೇರಲು ಸರ್ಕಾರ ಪ್ರಯತ್ನಿಸಲಿದೆ-ವಿಶ್ವೇಶ್ವರ ಹೆಗಡೆ

ಬೆಂಗಳೂರು: ಅನುದಾನಿತ ಕಾಲೇಜು ಬೋಧಕ ಉಪನ್ಯಾಸಕರಿಗೆ ನೂತನ ಪಿಂಚಣಿ ನೀತಿಯ ಅಡಿಯಲ್ಲಿ ಪಿಂಚಣಿ ಸೌಲಭ್ಯ ಒದಗಿಸವಂತೆ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಮೇಲೆ ಒತ್ತಡ ಹೇರಲು ಸರ್ಕಾರ ಪ್ರಯತ್ನಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ವಿಧಾನ ಪರಿಷತ್‌ನಲ್ಲಿ ಭರವಸೆ ನೀಡಿದರು.

ಜೆಡಿಎಸ್‌ನ ಪುಟ್ಟಣ್ಣ ಮತ್ತು ಪಕ್ಷೇತರ ಸದಸ್ಯ ಮರಿತಿಬ್ಬೇಗೌಡ ಅವರು ನಿಯಮ 330ರ ಅಡಿ ಪ್ರಸ್ತಾಪಿಸಿದ ಸೂಚನೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವರು, `ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸರ್ಕಾರದ ವತಿಯಿಂದ ಪಿಂಚಣಿ ಸೌಲಭ್ಯ ಒದಗಿಸಲು ಸಾಧ್ಯವಿಲ್ಲ. ಆಡಳಿತ ಮಂಡಳಿಗಳೇ ಈ ಸೌಲಭ್ಯವನ್ನು ನೀಡಬೇಕು. ಆಡಳಿತ ಮಂಡಳಿಗಳ ಮನವೊಲಿಕೆಗೆ ನಾವು ಪ್ರಯತ್ನಿಸುತ್ತೇವೆ` ಎಂದರು.

ಪರಿಷ್ಕೃತ ವೇತನ ಶ್ರೇಣಿ
ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ರಾಜ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಆಯುರ್ವೇದ ವೈದ್ಯ ಕಾಲೇಜುಗಳು ಮತ್ತು ಆರು ಸ್ವಾಯತ್ತ ಸಂಸ್ಥೆಗಳ ಬೋಧಕ ವರ್ಗದವರಿಗೆ ಆರನೇ ವೇತನ ಆಯೋಗದ ಶಿಫಾರಸಿನಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಪರಿಷ್ಕೃತ ವೇತನ ಶ್ರೇಣಿಯನ್ನು ಈ ತಿಂಗಳಿನಿಂದಲೇ ಜಾರಿಗೊಳಿಸಲಾ ಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಪಕ್ಷೇತರ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, `2011ರ ಏಪ್ರಿಲ್ 1ರಿಂದಲೇ ಪರಿಷ್ಕೃತ ವೇತನ ಶ್ರೇಣಿ ಜಾರಿಯಾಗಲಿದೆ. ಈ ಉದ್ದೇಶಕ್ಕಾಗಿಯೇ ರಾಜ್ಯ ಸರ್ಕಾರ ರೂ 150 ಕೋಟಿ ಮಂಜೂರು ಮಾಡಿದೆ` ಎಂದರು.

ಕಾಂಗ್ರೆಸ್ ಸದಸ್ಯ ಮಹಾಂತೇಶ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿದ ರಾಮದಾಸ್, ರಾಜ್ಯದ 10 ಸ್ವಾಯತ್ತ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 843 ಬೋಧಕ ಮತ್ತು 3,886 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಮುಂದಿನ ವರ್ಷದಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು ಎಂರು.
To see this click on Prajavani 07.12.2011

ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಅನಿರ್ದಿಷ್ಟಾವಧಿ ಅಮರಣಾಂತ ಉಪವಾಸ ಸತ್ಯಾಗ್ರಹ !

ಶಿರಾ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲ್ಲೂಕಿನ ಬರಗೂರು ಆಂಜನೇಯ ಸ್ವಾಮಿ ಗ್ರಾಮಾಂತರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಶಿಕ್ಷಕರು, ಉಪನ್ಯಾಸಕರು ಅನಿರ್ದಿಷ್ಟಾವಧಿ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಆರಂಭಿಸಿದರು.

ಕಾಲೇಜು ಮುಂಭಾಗದ ಆವರಣದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಿಬ್ಬಂದಿ ಪರವಾಗಿ ಮಾತನಾಡಿದ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಿ.ಎನ್.ಜಯರಾಮಯ್ಯ ಮಾತನಾಡಿ, ಸದರಿ ಸಂಸ್ಥೆ 1994-95ನೇ ಸಾಲಿನಲ್ಲಿ ಆರಂಭವಾಗಿದ್ದು, ಸರ್ಕಾರ ಅನುದಾನ ನೀಡಲು ಒಪ್ಪಿದೆ. ಆದರೆ ಸಂಸ್ಥೆ ಕಾರ್ಯದರ್ಶಿ ಬಿ.ಆರ್.ಕರೇಗೌಡ ತನ್ನ ವೈಯಕ್ತಿಕ ಹಿತಾಸಕ್ತಿಯಿಂದ ಅನುದಾನ ಬಿಡುಗಡೆಯಾಗದಂತೆ ತಡೆ ಒಡ್ಡಿದ್ದಾರೆ ಎಂದು ಆರೋಪಿಸಿದರು.

ತಾಲ್ಲೂಕು ಶಿಕ್ಷಣಾಧಿಕಾರಿ ಕಚೇರಿ ಪರವಾಗಿ ಆಗಮಿಸಿದ್ದ ಸಿಬ್ಬಂದಿ ಡಿ.ಕೆ.ತಿಪ್ಪೇಸ್ವಾಮಿ ಮನವಿ ಸ್ವೀಕರಿಸಿದರು. ಸತ್ಯಾಗ್ರಹದಲ್ಲಿ ಉಪನ್ಯಾಸಕ ಎಂ.ಗೋವಿಂದರಾಯ, ಓಂಕಾರ್, ಎಂ.ಜಯಲಕ್ಷ್ಮಿ, ಆರ್.ಜಯಲಕ್ಷ್ಮಿ, ಎಚ್.ಎಲ್.ಪಂಕಜ, ಲೋಕೇಶ್, ಬಲವಂತರಾಯ, ಜಯಪ್ರಕಾಶ್, ಗುರುಸಿದ್ದಪ್ಪ, ಎಸ್.ಆರ್.ರಾಜು ಮತ್ತಿತರರು ಪಾಲ್ಗೊಂಡಿದ್ದರು.

To read this thread click on Prajavani 07.12.2011