ನೆಲಮಂಗಲ: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆಗೆ ಒತ್ತಾಯಿಸಿ ಈ ತಿಂಗಳ 8ರಿಂದ ರಾಜ್ಯಾದ್ಯಂತ ಅನಿರ್ದಿಷ್ಟ ಕಾಲ ತರಗತಿಗಳನ್ನು ಬಹಿಷ್ಕರಿಸಲು ರಾಜ್ಯ ಪದವಿ ಪೂರ್ವ ಕಾಲೇಜುಗಳ ವಿವಿಧ ಸಂಘಟನೆಗಳ ಸಮನ್ವಯ ಸಮಿತಿ ಕರೆ ನೀಡಿದೆ.
ಇಲ್ಲಿನ ಮುರಳಿ ಕಾಲೇಜಿನಲ್ಲಿ ಸೋಮವಾರ ಸಭೆ ಸೇರಿದ್ದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಸಂಘ ಮುಷ್ಕರಕ್ಕೆ ಬೆಂಬಲ ಸೂಚಿಸಲು ನಿರ್ಣಯಿಸಿದೆ.
ಸಮಿತಿಯ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪ್ರಕಾಶ್ ಮಾತನಾಡಿ, ಈ ಹಿಂದೆ ಮೌಲ್ಯಮಾಪನ, ಶಿಕ್ಷಕರ ದಿನಾಚರಣೆ ಬಹಿಷ್ಕಾರ, ಕಪ್ಪು ಬಟ್ಟೆ ಧರಿಸಿ ಜಾಥಾ ನಡೆಸಿದ್ದರ ಜೊತೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರ್ಕಾರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷಿಸಿದೆ.
ಈ ಹಿನ್ನೆಲೆಯಲ್ಲಿ ಈ ತಿಂಗಳ 8ರಂದು ತರಗತಿ ಬಹಿಷ್ಕರಿಸಿ ಕಾಲೇಜಿನ ಆವರಣದಲ್ಲಿ ಪ್ರತಿಭಟಿಸಲಾಗುವುದು. ಡಿ. 9ರಂದು ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಭೆ ಸೇರಿ ಜಿಲ್ಲಾಧಿಕಾರಿಗಳಿಗೆ ಸಮವಿ ಸಲ್ಲಿಸಲಾಗುವುದು. ಡಿ. 10ರಿಂದ ಕೇಂದ್ರ ಸಂಘದ ಸೂಚನೆ ಬರುವವರೆಗೂ ಅನಿರ್ದಿಷ್ಟಾವಧಿ ತರಗತಿಗಳನ್ನು ಬಹಿಷ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಪ್ರಾಂಶುಪಾಲರಾದ ಎ.ಎಸ್.ರಮಾನಂದ್, ಆರ್.ಪ್ರದೀಪ್ಕುಮಾರ್ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
To read this click on Prajavani 07.12.2011
ಇಲ್ಲಿನ ಮುರಳಿ ಕಾಲೇಜಿನಲ್ಲಿ ಸೋಮವಾರ ಸಭೆ ಸೇರಿದ್ದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಸಂಘ ಮುಷ್ಕರಕ್ಕೆ ಬೆಂಬಲ ಸೂಚಿಸಲು ನಿರ್ಣಯಿಸಿದೆ.
ಸಮಿತಿಯ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪ್ರಕಾಶ್ ಮಾತನಾಡಿ, ಈ ಹಿಂದೆ ಮೌಲ್ಯಮಾಪನ, ಶಿಕ್ಷಕರ ದಿನಾಚರಣೆ ಬಹಿಷ್ಕಾರ, ಕಪ್ಪು ಬಟ್ಟೆ ಧರಿಸಿ ಜಾಥಾ ನಡೆಸಿದ್ದರ ಜೊತೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರ್ಕಾರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷಿಸಿದೆ.
ಈ ಹಿನ್ನೆಲೆಯಲ್ಲಿ ಈ ತಿಂಗಳ 8ರಂದು ತರಗತಿ ಬಹಿಷ್ಕರಿಸಿ ಕಾಲೇಜಿನ ಆವರಣದಲ್ಲಿ ಪ್ರತಿಭಟಿಸಲಾಗುವುದು. ಡಿ. 9ರಂದು ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಭೆ ಸೇರಿ ಜಿಲ್ಲಾಧಿಕಾರಿಗಳಿಗೆ ಸಮವಿ ಸಲ್ಲಿಸಲಾಗುವುದು. ಡಿ. 10ರಿಂದ ಕೇಂದ್ರ ಸಂಘದ ಸೂಚನೆ ಬರುವವರೆಗೂ ಅನಿರ್ದಿಷ್ಟಾವಧಿ ತರಗತಿಗಳನ್ನು ಬಹಿಷ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಪ್ರಾಂಶುಪಾಲರಾದ ಎ.ಎಸ್.ರಮಾನಂದ್, ಆರ್.ಪ್ರದೀಪ್ಕುಮಾರ್ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
No comments:
Post a Comment