ರಾಯಚೂರು: ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆಗೆ ಹಲವು ವರ್ಷಗಳಿಂದ ಒತ್ತಾಯಿಸುತ್ತ ಬರಲಾಗಿದ್ದರೂ ಸರ್ಕಾರ ಗಮನಹರಿಸಿಲ್ಲ. ಈ ಹಿನ್ನೆಲೆಯಲ್ಲಿ ಇದೇ 8ರಿಂದ ಪದವಿಪೂರ್ವ ಕಾಲೇಜುಗಳಲ್ಲಿ ಅನಿರ್ದಿಷ್ಟ ಕಾಲ ತರಗತಿ ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಪ್ಪ ಭಂಡಾರಿ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 8ರಂದು ಕಾಲೇಜಿನ ಹಾಜರಾತಿಯಲ್ಲಿ ಸಹಿ ಮಾಡಿ ತರಗತಿಗಳನ್ನು ಬಹಿಷ್ಕರಿಸಿ ಕಾಲೇಜಿನ ಅವಧಿ ಮುಗಿಯುವವರೆಗೂ ಇರಲಾಗುತ್ತದೆ, 9ರಂದು ಸಾಮೂಹಿಕ ರಜೆ ಹಾಕಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮಧ್ಯಾಹ್ನ 12ಕ್ಕೆ ಮನವಿ ಸಲ್ಲಿಸಲಾಗುತ್ತದೆ. ಜಿಲ್ಲೆಯ ಅನುದಾನಿತ ಮತ್ತು ಅನುದಾನರಹಿತ ಸುಮಾರು 70 ಕಾಲೇಜಿನ 350ಕ್ಕೂ ಹೆಚ್ಚು ಉಪನ್ಯಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
8ರಿಂದ ತರಗತಿಗಳನ್ನು ಬಹಿಷ್ಕರಿಸಲಾಗುತ್ತದೆ. ಬೇಡಿಕೆ ಈಡೇರುವವರೆಗೂ ತರಗತಿಗಳನ್ನು ಉಪನ್ಯಾಸಕರು ತೆಗೆದುಕೊಳ್ಳುವುದಿಲ್ಲ. ಆಯಾ ತಾಲ್ಲೂಕು ಮಟ್ಟದಲ್ಲಿಯೂ ಇದೇ ರೀತಿ ಪ್ರತಿಭಟನೆಯನ್ನು ಉಪನ್ಯಾಸಕರು ಮುಂದುವರಿಸುವರು ಎಂದು ಹೇಳಿದರು.
ಕಾಲೇಜು ವಿದ್ಯಾರ್ಥಿಗಳ ಬಗ್ಗೆ, ಅವರ ಭವಿಷ್ಯದ ಬಗ್ಗೆ ಉಪನ್ಯಾಸಕ ವರ್ಗಕ್ಕೆ ಅಪಾರ ಕಳಕಳಿ ಇದೆ. ಈ ಬಗ್ಗೆ ಆತಂಕ ಪಾಲಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೇಡ. ಸರ್ಕಾರ ಬೇಡಿಕೆ ಈಡೇರಿಸಿದ ಬಳಿಕ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಂಡು ಪಠ್ಯಪಾಠ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
1-7-2055ರಿಂದ ಪೂರ್ವಾನ್ವಯವಾಗುವಂತೆ ಉಪನ್ಯಾಸಕರಿಗೆ 14,050 ರೂಪಾಯಿ, ಪ್ರಾಚಾರ್ಯರಿಗೆ 18,150 ಮೂಲವೇತನ ನಿಗದಿಪಡಿಸಬೇಕು, ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಉಪನ್ಯಾಸಕರಿಗೆ ಕಾಲ್ಪನಿಕ ವೇತನ ಬಡ್ತಿ ನೀಡಬೇಕು, ಎಂಫಿಲ್, ಪಿಎಚ್ಡಿ, ಎನ್ಇಟಿ, ಎಸ್ಇಟಿ ಪಾಸಾದ ಪಿಯುಸಿ ಉಪನ್ಯಾಸಕರಿಗೆ ವಿಶೇಷ ಬಡ್ತಿ ನೀಡಿ ಪದವಿ ಕಾಲೇಜುಗಳಿಗೆ ನೇಮಕ ಮಾಡಬೇಕು,
1995ರ ನಂತರದಲ್ಲಿ ಪ್ರಾರಂಭಗೊಂಡ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಅನುದಾನರಹಿತ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ಕನಿಷ್ಠ ವೇತನ ಜಾರಿಗೊಳಿಸುವ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಪದವಿ ಕಡ್ಡಾಯಗೊಳಿಸಿರುವುದನ್ನು ರದ್ದುಪಡಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ ಎಂದು ವಿವರಿಸಿದರು.
ಕಳೆದ ಏಪ್ರಿಲ್ನಲ್ಲಿ ಸಂಘವು ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ವೇತನ ತಾರತಮ್ಯ ಸರಿಪಡಿಸಲು ಹೋರಾಟ ಮಾಡಿತ್ತು. ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸಲು ಸರ್ಕಾರದಿಂದ ನೇಮಸಲ್ಪಟ್ಟ ಸಮಿತಿಗೆ 4ನೇ ಮತ್ತು 5ನೇ ವೇತನ ಆಯೋಗದಲ್ಲಿ ಆದ ಅನ್ಯಾಯವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಮನವಿ ಸಲ್ಲಿಸಲಾಗಿತ್ತು. ಅಲ್ಲದೇ ಜುಲೈ 11ರಂದು ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸಲು ಉದ್ದೇಶಿಸಲಾಗಿತ್ತು.
ಆದರೆ ಜೂನ್ 27ರಂದು ಅಧ್ಯಯನ ಸಮಿತಿಯು ವರದಿಯನ್ನು ಶಿಕ್ಷಣ ಸಚಿವರಿಗೆ ಅಧಿಕೃತವಾಗಿ ಸಲ್ಲಿಕೆ ಮಾಡಿತ್ತು. ಈ ವರದಿ ಸಲ್ಲಿಸಿದ ಬಳಿಕವೂ ಸರ್ಕಾರವು ಅನುಷ್ಠಾನಕ್ಕೆ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಸಮನ್ವಯ ಸಮಿತಿ ಜಂಟಿಯಾಗಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಾಸಾಬ್ ಅಂಗಡಿ, ಖಜಾಂಚಿ ಗೋವರ್ಧನರೆಡ್ಡಿ, ಅಮರೇಶ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 8ರಂದು ಕಾಲೇಜಿನ ಹಾಜರಾತಿಯಲ್ಲಿ ಸಹಿ ಮಾಡಿ ತರಗತಿಗಳನ್ನು ಬಹಿಷ್ಕರಿಸಿ ಕಾಲೇಜಿನ ಅವಧಿ ಮುಗಿಯುವವರೆಗೂ ಇರಲಾಗುತ್ತದೆ, 9ರಂದು ಸಾಮೂಹಿಕ ರಜೆ ಹಾಕಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮಧ್ಯಾಹ್ನ 12ಕ್ಕೆ ಮನವಿ ಸಲ್ಲಿಸಲಾಗುತ್ತದೆ. ಜಿಲ್ಲೆಯ ಅನುದಾನಿತ ಮತ್ತು ಅನುದಾನರಹಿತ ಸುಮಾರು 70 ಕಾಲೇಜಿನ 350ಕ್ಕೂ ಹೆಚ್ಚು ಉಪನ್ಯಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
8ರಿಂದ ತರಗತಿಗಳನ್ನು ಬಹಿಷ್ಕರಿಸಲಾಗುತ್ತದೆ. ಬೇಡಿಕೆ ಈಡೇರುವವರೆಗೂ ತರಗತಿಗಳನ್ನು ಉಪನ್ಯಾಸಕರು ತೆಗೆದುಕೊಳ್ಳುವುದಿಲ್ಲ. ಆಯಾ ತಾಲ್ಲೂಕು ಮಟ್ಟದಲ್ಲಿಯೂ ಇದೇ ರೀತಿ ಪ್ರತಿಭಟನೆಯನ್ನು ಉಪನ್ಯಾಸಕರು ಮುಂದುವರಿಸುವರು ಎಂದು ಹೇಳಿದರು.
ಕಾಲೇಜು ವಿದ್ಯಾರ್ಥಿಗಳ ಬಗ್ಗೆ, ಅವರ ಭವಿಷ್ಯದ ಬಗ್ಗೆ ಉಪನ್ಯಾಸಕ ವರ್ಗಕ್ಕೆ ಅಪಾರ ಕಳಕಳಿ ಇದೆ. ಈ ಬಗ್ಗೆ ಆತಂಕ ಪಾಲಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೇಡ. ಸರ್ಕಾರ ಬೇಡಿಕೆ ಈಡೇರಿಸಿದ ಬಳಿಕ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಂಡು ಪಠ್ಯಪಾಠ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
1-7-2055ರಿಂದ ಪೂರ್ವಾನ್ವಯವಾಗುವಂತೆ ಉಪನ್ಯಾಸಕರಿಗೆ 14,050 ರೂಪಾಯಿ, ಪ್ರಾಚಾರ್ಯರಿಗೆ 18,150 ಮೂಲವೇತನ ನಿಗದಿಪಡಿಸಬೇಕು, ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಉಪನ್ಯಾಸಕರಿಗೆ ಕಾಲ್ಪನಿಕ ವೇತನ ಬಡ್ತಿ ನೀಡಬೇಕು, ಎಂಫಿಲ್, ಪಿಎಚ್ಡಿ, ಎನ್ಇಟಿ, ಎಸ್ಇಟಿ ಪಾಸಾದ ಪಿಯುಸಿ ಉಪನ್ಯಾಸಕರಿಗೆ ವಿಶೇಷ ಬಡ್ತಿ ನೀಡಿ ಪದವಿ ಕಾಲೇಜುಗಳಿಗೆ ನೇಮಕ ಮಾಡಬೇಕು,
1995ರ ನಂತರದಲ್ಲಿ ಪ್ರಾರಂಭಗೊಂಡ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಅನುದಾನರಹಿತ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ಕನಿಷ್ಠ ವೇತನ ಜಾರಿಗೊಳಿಸುವ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಪದವಿ ಕಡ್ಡಾಯಗೊಳಿಸಿರುವುದನ್ನು ರದ್ದುಪಡಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ ಎಂದು ವಿವರಿಸಿದರು.
ಕಳೆದ ಏಪ್ರಿಲ್ನಲ್ಲಿ ಸಂಘವು ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ವೇತನ ತಾರತಮ್ಯ ಸರಿಪಡಿಸಲು ಹೋರಾಟ ಮಾಡಿತ್ತು. ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸಲು ಸರ್ಕಾರದಿಂದ ನೇಮಸಲ್ಪಟ್ಟ ಸಮಿತಿಗೆ 4ನೇ ಮತ್ತು 5ನೇ ವೇತನ ಆಯೋಗದಲ್ಲಿ ಆದ ಅನ್ಯಾಯವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಮನವಿ ಸಲ್ಲಿಸಲಾಗಿತ್ತು. ಅಲ್ಲದೇ ಜುಲೈ 11ರಂದು ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸಲು ಉದ್ದೇಶಿಸಲಾಗಿತ್ತು.
ಆದರೆ ಜೂನ್ 27ರಂದು ಅಧ್ಯಯನ ಸಮಿತಿಯು ವರದಿಯನ್ನು ಶಿಕ್ಷಣ ಸಚಿವರಿಗೆ ಅಧಿಕೃತವಾಗಿ ಸಲ್ಲಿಕೆ ಮಾಡಿತ್ತು. ಈ ವರದಿ ಸಲ್ಲಿಸಿದ ಬಳಿಕವೂ ಸರ್ಕಾರವು ಅನುಷ್ಠಾನಕ್ಕೆ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಸಮನ್ವಯ ಸಮಿತಿ ಜಂಟಿಯಾಗಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಾಸಾಬ್ ಅಂಗಡಿ, ಖಜಾಂಚಿ ಗೋವರ್ಧನರೆಡ್ಡಿ, ಅಮರೇಶ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.
To read this click on Prajavani 07.12.2011
No comments:
Post a Comment