ಬೆಂಗಳೂರು: ಅನುದಾನಿತ ಕಾಲೇಜು ಬೋಧಕ ಉಪನ್ಯಾಸಕರಿಗೆ ನೂತನ ಪಿಂಚಣಿ ನೀತಿಯ ಅಡಿಯಲ್ಲಿ ಪಿಂಚಣಿ ಸೌಲಭ್ಯ ಒದಗಿಸವಂತೆ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಮೇಲೆ ಒತ್ತಡ ಹೇರಲು ಸರ್ಕಾರ ಪ್ರಯತ್ನಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ವಿಧಾನ ಪರಿಷತ್ನಲ್ಲಿ ಭರವಸೆ ನೀಡಿದರು.
ಜೆಡಿಎಸ್ನ ಪುಟ್ಟಣ್ಣ ಮತ್ತು ಪಕ್ಷೇತರ ಸದಸ್ಯ ಮರಿತಿಬ್ಬೇಗೌಡ ಅವರು ನಿಯಮ 330ರ ಅಡಿ ಪ್ರಸ್ತಾಪಿಸಿದ ಸೂಚನೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವರು, `ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸರ್ಕಾರದ ವತಿಯಿಂದ ಪಿಂಚಣಿ ಸೌಲಭ್ಯ ಒದಗಿಸಲು ಸಾಧ್ಯವಿಲ್ಲ. ಆಡಳಿತ ಮಂಡಳಿಗಳೇ ಈ ಸೌಲಭ್ಯವನ್ನು ನೀಡಬೇಕು. ಆಡಳಿತ ಮಂಡಳಿಗಳ ಮನವೊಲಿಕೆಗೆ ನಾವು ಪ್ರಯತ್ನಿಸುತ್ತೇವೆ` ಎಂದರು.
ಪರಿಷ್ಕೃತ ವೇತನ ಶ್ರೇಣಿ
ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ರಾಜ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಆಯುರ್ವೇದ ವೈದ್ಯ ಕಾಲೇಜುಗಳು ಮತ್ತು ಆರು ಸ್ವಾಯತ್ತ ಸಂಸ್ಥೆಗಳ ಬೋಧಕ ವರ್ಗದವರಿಗೆ ಆರನೇ ವೇತನ ಆಯೋಗದ ಶಿಫಾರಸಿನಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಪರಿಷ್ಕೃತ ವೇತನ ಶ್ರೇಣಿಯನ್ನು ಈ ತಿಂಗಳಿನಿಂದಲೇ ಜಾರಿಗೊಳಿಸಲಾ ಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಪಕ್ಷೇತರ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, `2011ರ ಏಪ್ರಿಲ್ 1ರಿಂದಲೇ ಪರಿಷ್ಕೃತ ವೇತನ ಶ್ರೇಣಿ ಜಾರಿಯಾಗಲಿದೆ. ಈ ಉದ್ದೇಶಕ್ಕಾಗಿಯೇ ರಾಜ್ಯ ಸರ್ಕಾರ ರೂ 150 ಕೋಟಿ ಮಂಜೂರು ಮಾಡಿದೆ` ಎಂದರು.
ಕಾಂಗ್ರೆಸ್ ಸದಸ್ಯ ಮಹಾಂತೇಶ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿದ ರಾಮದಾಸ್, ರಾಜ್ಯದ 10 ಸ್ವಾಯತ್ತ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 843 ಬೋಧಕ ಮತ್ತು 3,886 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಮುಂದಿನ ವರ್ಷದಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು ಎಂರು.
To see this click on Prajavani 07.12.2011
ಜೆಡಿಎಸ್ನ ಪುಟ್ಟಣ್ಣ ಮತ್ತು ಪಕ್ಷೇತರ ಸದಸ್ಯ ಮರಿತಿಬ್ಬೇಗೌಡ ಅವರು ನಿಯಮ 330ರ ಅಡಿ ಪ್ರಸ್ತಾಪಿಸಿದ ಸೂಚನೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವರು, `ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸರ್ಕಾರದ ವತಿಯಿಂದ ಪಿಂಚಣಿ ಸೌಲಭ್ಯ ಒದಗಿಸಲು ಸಾಧ್ಯವಿಲ್ಲ. ಆಡಳಿತ ಮಂಡಳಿಗಳೇ ಈ ಸೌಲಭ್ಯವನ್ನು ನೀಡಬೇಕು. ಆಡಳಿತ ಮಂಡಳಿಗಳ ಮನವೊಲಿಕೆಗೆ ನಾವು ಪ್ರಯತ್ನಿಸುತ್ತೇವೆ` ಎಂದರು.
ಪರಿಷ್ಕೃತ ವೇತನ ಶ್ರೇಣಿ
ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ರಾಜ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಆಯುರ್ವೇದ ವೈದ್ಯ ಕಾಲೇಜುಗಳು ಮತ್ತು ಆರು ಸ್ವಾಯತ್ತ ಸಂಸ್ಥೆಗಳ ಬೋಧಕ ವರ್ಗದವರಿಗೆ ಆರನೇ ವೇತನ ಆಯೋಗದ ಶಿಫಾರಸಿನಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಪರಿಷ್ಕೃತ ವೇತನ ಶ್ರೇಣಿಯನ್ನು ಈ ತಿಂಗಳಿನಿಂದಲೇ ಜಾರಿಗೊಳಿಸಲಾ ಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಪಕ್ಷೇತರ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, `2011ರ ಏಪ್ರಿಲ್ 1ರಿಂದಲೇ ಪರಿಷ್ಕೃತ ವೇತನ ಶ್ರೇಣಿ ಜಾರಿಯಾಗಲಿದೆ. ಈ ಉದ್ದೇಶಕ್ಕಾಗಿಯೇ ರಾಜ್ಯ ಸರ್ಕಾರ ರೂ 150 ಕೋಟಿ ಮಂಜೂರು ಮಾಡಿದೆ` ಎಂದರು.
ಕಾಂಗ್ರೆಸ್ ಸದಸ್ಯ ಮಹಾಂತೇಶ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿದ ರಾಮದಾಸ್, ರಾಜ್ಯದ 10 ಸ್ವಾಯತ್ತ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 843 ಬೋಧಕ ಮತ್ತು 3,886 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಮುಂದಿನ ವರ್ಷದಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು ಎಂರು.
No comments:
Post a Comment