ದಾವಣಗೆರೆ: ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಬೋಧಿಸಲು ಹಾಗೂ ತರಬೇತಿ ನೀಡಲು ಪ್ರತ್ಯೇಕವಾಗಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ! ಇದರಿಂದಾಗಿ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವವರಲ್ಲಿ ಕ್ರೀಡೆಗಳಲ್ಲಿ ಆಸಕ್ತಿ ಇರುವ ಸಾವಿರಾರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ಸೌಲಭ್ಯ ದೊರೆಯುತ್ತಿಲ್ಲ.
ದೈಹಿಕ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ, ಕ್ರೀಡಾಪಟುಗಳಿಗೆ ಉತ್ತಮ ಮಾರ್ಗದರ್ಶನ ದೊರೆಯುವಂತಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿರುತ್ತದೆ. ಆದರೆ, ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಯನ್ನು ಕಲ್ಪಿಸುವುದಕ್ಕೆ ಕ್ರಮ ಕೈಗೊಂಡಿಲ್ಲ.
ರಾಜ್ಯದಲ್ಲಿ ತಾಲ್ಲೂಕು, ಹೋಬಳಿ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ (ಕೆಲವೆಡೆ ಹಳ್ಳಿಯಲ್ಲಿಯೂ) ಪ್ರಸ್ತುತ ಒಟ್ಟು 12,000 ಸರ್ಕಾರಿ ಪದವಿಪೂರ್ವ ಕಾಲೇಜುಗಳಿವೆ.
ಹಿಂದೆ, ಸಂಯುಕ್ತ ಪದವಿಪೂರ್ವ ಕಾಲೇಜುಗಳ ವ್ಯವಸ್ಥೆ ಇತ್ತು. ಆಗ, ಪ್ರೌಢಶಾಲೆಯ ದೈಹಿಕ ಶಿಕ್ಷಕರೇ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೂ ದೈಹಿಕ ಶಿಕ್ಷಣ ನೀಡುತ್ತಿದ್ದರು. ಈಚಿನ ವರ್ಷಗಳಲ್ಲಿ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳ ವ್ಯವಸ್ಥೆಯನ್ನು ಪ್ರತ್ಯೇಕಿಸಲಾಗಿದೆ. ಹೀಗಾಗಿ, ಪಿಯು ಕಾಲೇಜುಗಳಿಗೆ ದೈಹಿಕ ಶಿಕ್ಷಣ ಉಪನ್ಯಾಸಕರು ಇಲ್ಲದಂತಾಗಿದ್ದಾರೆ. ಇರುವ ಉಪನ್ಯಾಸಕರಿಂದಲೇ ದೈಹಿಕ ಶಿಕ್ಷಣದ ಕೆಲಸ ಮಾಡಿಸಲಾಗುತ್ತಿದೆ.
ಇದು, ಕೆಲ ಉಪನ್ಯಾಸಕರಿಗೆ `ಹೊರೆ`ಯಾದರೆ, ಕೆಲವರಿಗೆ `ಸಂಪೂರ್ಣ ಜ್ಞಾನವಿಲ್ಲದ ವಿದ್ಯೆ` ಕಲಿಸಿಕೊಡಬೇಕಾದ ಅನಿವಾರ್ಯತೆ! ಇದರಿಂದ ಅಂತಿಮವಾಗಿ ಕ್ರೀಡೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಪರಿಣಾಮ ಎದುರಿಸುವಂತಾಗಿದೆ.
ಖಾಸಗಿ ಕಾಲೇಜುಗಳಲ್ಲಿದ್ದಾರೆ!: ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಪಿಯು ಕಾಲೇಜುಗಳಲ್ಲಿ ಪ್ರತ್ಯೇಕ ದೈಹಿಕ ಶಿಕ್ಷಣ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ದೊರೆಯುತ್ತಿದೆ.
ಮಾದರಿಯಾಗಬೇಕಾದ ಸರ್ಕಾರ ಪಿಯು ಕಾಲೇಜುಗಳಲ್ಲಿಯೇ ದೈಹಿಕ ಶಿಕ್ಷಣ ಉಪನ್ಯಾಸಕರ ನೇಮಕಕ್ಕೆ ಮುಂದಾಗದೇ, ಬಡ ಪ್ರತಿಭಾವಂತರನ್ನು ವಂಚಿಸಿದಂತಾಗಿದೆ. ಸರ್ಕಾರಿ ಕಾಲೇಜುಗಳಿಗೆ ಬರುವ ಬಹುತೇಕರು ದಲಿತರು, ಹಿಂದುಳಿದ ವರ್ಗದವರು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಾಗಿರುತ್ತಾರೆ.
ನಗರ ಅಥವಾ ಪಟ್ಟಣದ ಪಿಯು ಕಾಲೇಜೊಂದರಲ್ಲಿ ವಿವಿಧ ವಿಭಾಗದಿಂದ 500 ವಿದ್ಯಾರ್ಥಿಗಳಿದ್ದರೆ, ಅದರಲ್ಲಿ 60ರಿಂದ 100 ಮಂದಿ ಕ್ರೀಡೆಗಳಲ್ಲಿ ಆಸಕ್ತಿ ಇರುವ ಪ್ರತಿಭೆಗಳಿರುತ್ತಾರೆ. ಅವರು ಸೂಕ್ತ ತರಬೇತಿ, ಮಾರ್ಗದರ್ಶನಕ್ಕಾಗಿ ಖಾಸಗಿ ಸಂಸ್ಥೆಗಳು, ಕೋಚ್ಗಳ ಬಳಿಗೆ ದುಬಾರಿ ಶುಲ್ಕ ನೀಡಿ ಹೋಗಬೇಕಾದ ಸ್ಥಿತಿ ಇದೆ. ಎಷ್ಟೋ ಬಡ ವಿದ್ಯಾರ್ಥಿಗಳಿಗೆ ಶುಲ್ಕ ತೆತ್ತು ತರಬೇತಿ ಹೊಂದಲು ಸಾಧ್ಯವಾಗುವುದಿಲ್ಲ. ಆಗ, ಪ್ರತಿಭೆ ಕಮರಿದಂತಾಗುತ್ತದೆ. ಇಂತಹ ಅನುಭವ ನೂರಾರು ಮಂದಿಗೆ ಆಗಿದೆ.
ಸರ್ಕಾರವೇ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಿಸಿದ್ದರೆ ಉಪಯೋಗವಾಗುತ್ತಿತ್ತು ಎನ್ನುತ್ತಾರೆ ಹೆಸರು ಬಹಿರಂಗಪಡಿಸಲಿಚ್ಛಿಸದ ಪ್ರಾಂಶುಪಾಲರೊಬ್ಬರು.
ಶೀಘ್ರದಲ್ಲೇ ಸಿಗಬಹುದು...: ಪ್ರೌಢಶಾಲೆಗಳ ಶಿಕ್ಷಕರಿಗೆ ಪದವಿಪೂರ್ವ ಕಾಲೇಜುಗಳಿಗೆ ಉಪನ್ಯಾಸಕರಾಗಿ ಬಡ್ತಿ ನೀಡುವಂತೆ, ಎಂಪಿಇಡಿ ಮಾಡಿಕೊಂಡಿರುವ ದೈಹಿಕ ಶಿಕ್ಷಕರಿಗೂ ಬಡ್ತಿ ಕಲ್ಪಿಸಬೇಕು ಎಂಬ ಒತ್ತಾಯ ಹಿಂದಿನಿಂದಲೂ ಕೇಳಿಬಂದಿದೆ. ಆದರೆ, ಇದರತ್ತಲೂ ಸರ್ಕಾರ ಗಮನ ಹರಿಸಿಲ್ಲ.
ಈ ಕುರಿತು ಪ್ರತಿಕ್ರಿಯಿಸಿದ ಪದವಿಪೂರ್ವ ಹಾಗೂ ವೃತ್ತಿಶಿಕ್ಷಣ ಇಲಾಖೆ ಉಪ ನಿರ್ದೇಶಕ ರುದ್ರಮುನಿ, `ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರತ್ಯೇಕ ದೈಹಿಕ ಶಿಕ್ಷಣ ಉಪನ್ಯಾಸಕರು ಇಲ್ಲದಿರುವುದು ನಿಜ. ನಾವು, ರಾಜ್ಯ ಮತ್ತು ಜಿಲ್ಲಾಮಟ್ಟದ ಕ್ರೀಡಾಕೂಟಗಳು ನಡೆದಾಗ ಇತರೆ ಕೋಚ್ಗಳನ್ನು ಬಳಸಿಕೊಳ್ಳುತ್ತಿದ್ದೇವೆ. ಇಲಾಖೆಯಲ್ಲಿ ನೂತನವಾಗಿ ಸಿ ಅಂಡ್ ಆರ್ (ವೃಂದ ಮತ್ತು ನೇಮಕಾತಿ) ನಿಯಮಾವಳಿ ಸಿದ್ಧಪಡಿಸಲಾಗುತ್ತಿದೆ. ಇದು ಜಾರಿಯಾದ ನಂತರ ಕಾಲೇಜುಗಳಿಗೆ ದೈಹಿಕ ಶಿಕ್ಷಣ ಉಪನ್ಯಾಸಕರು ದೊರೆಯುವ ನಿರೀಕ್ಷೆ ಇದೆ` ಎಂದು ತಿಳಿಸಿದರು.
ದೈಹಿಕ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ, ಕ್ರೀಡಾಪಟುಗಳಿಗೆ ಉತ್ತಮ ಮಾರ್ಗದರ್ಶನ ದೊರೆಯುವಂತಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿರುತ್ತದೆ. ಆದರೆ, ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಯನ್ನು ಕಲ್ಪಿಸುವುದಕ್ಕೆ ಕ್ರಮ ಕೈಗೊಂಡಿಲ್ಲ.
ರಾಜ್ಯದಲ್ಲಿ ತಾಲ್ಲೂಕು, ಹೋಬಳಿ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ (ಕೆಲವೆಡೆ ಹಳ್ಳಿಯಲ್ಲಿಯೂ) ಪ್ರಸ್ತುತ ಒಟ್ಟು 12,000 ಸರ್ಕಾರಿ ಪದವಿಪೂರ್ವ ಕಾಲೇಜುಗಳಿವೆ.
ಹಿಂದೆ, ಸಂಯುಕ್ತ ಪದವಿಪೂರ್ವ ಕಾಲೇಜುಗಳ ವ್ಯವಸ್ಥೆ ಇತ್ತು. ಆಗ, ಪ್ರೌಢಶಾಲೆಯ ದೈಹಿಕ ಶಿಕ್ಷಕರೇ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೂ ದೈಹಿಕ ಶಿಕ್ಷಣ ನೀಡುತ್ತಿದ್ದರು. ಈಚಿನ ವರ್ಷಗಳಲ್ಲಿ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳ ವ್ಯವಸ್ಥೆಯನ್ನು ಪ್ರತ್ಯೇಕಿಸಲಾಗಿದೆ. ಹೀಗಾಗಿ, ಪಿಯು ಕಾಲೇಜುಗಳಿಗೆ ದೈಹಿಕ ಶಿಕ್ಷಣ ಉಪನ್ಯಾಸಕರು ಇಲ್ಲದಂತಾಗಿದ್ದಾರೆ. ಇರುವ ಉಪನ್ಯಾಸಕರಿಂದಲೇ ದೈಹಿಕ ಶಿಕ್ಷಣದ ಕೆಲಸ ಮಾಡಿಸಲಾಗುತ್ತಿದೆ.
ಇದು, ಕೆಲ ಉಪನ್ಯಾಸಕರಿಗೆ `ಹೊರೆ`ಯಾದರೆ, ಕೆಲವರಿಗೆ `ಸಂಪೂರ್ಣ ಜ್ಞಾನವಿಲ್ಲದ ವಿದ್ಯೆ` ಕಲಿಸಿಕೊಡಬೇಕಾದ ಅನಿವಾರ್ಯತೆ! ಇದರಿಂದ ಅಂತಿಮವಾಗಿ ಕ್ರೀಡೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಪರಿಣಾಮ ಎದುರಿಸುವಂತಾಗಿದೆ.
ಖಾಸಗಿ ಕಾಲೇಜುಗಳಲ್ಲಿದ್ದಾರೆ!: ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಪಿಯು ಕಾಲೇಜುಗಳಲ್ಲಿ ಪ್ರತ್ಯೇಕ ದೈಹಿಕ ಶಿಕ್ಷಣ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ದೊರೆಯುತ್ತಿದೆ.
ಮಾದರಿಯಾಗಬೇಕಾದ ಸರ್ಕಾರ ಪಿಯು ಕಾಲೇಜುಗಳಲ್ಲಿಯೇ ದೈಹಿಕ ಶಿಕ್ಷಣ ಉಪನ್ಯಾಸಕರ ನೇಮಕಕ್ಕೆ ಮುಂದಾಗದೇ, ಬಡ ಪ್ರತಿಭಾವಂತರನ್ನು ವಂಚಿಸಿದಂತಾಗಿದೆ. ಸರ್ಕಾರಿ ಕಾಲೇಜುಗಳಿಗೆ ಬರುವ ಬಹುತೇಕರು ದಲಿತರು, ಹಿಂದುಳಿದ ವರ್ಗದವರು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಾಗಿರುತ್ತಾರೆ.
ನಗರ ಅಥವಾ ಪಟ್ಟಣದ ಪಿಯು ಕಾಲೇಜೊಂದರಲ್ಲಿ ವಿವಿಧ ವಿಭಾಗದಿಂದ 500 ವಿದ್ಯಾರ್ಥಿಗಳಿದ್ದರೆ, ಅದರಲ್ಲಿ 60ರಿಂದ 100 ಮಂದಿ ಕ್ರೀಡೆಗಳಲ್ಲಿ ಆಸಕ್ತಿ ಇರುವ ಪ್ರತಿಭೆಗಳಿರುತ್ತಾರೆ. ಅವರು ಸೂಕ್ತ ತರಬೇತಿ, ಮಾರ್ಗದರ್ಶನಕ್ಕಾಗಿ ಖಾಸಗಿ ಸಂಸ್ಥೆಗಳು, ಕೋಚ್ಗಳ ಬಳಿಗೆ ದುಬಾರಿ ಶುಲ್ಕ ನೀಡಿ ಹೋಗಬೇಕಾದ ಸ್ಥಿತಿ ಇದೆ. ಎಷ್ಟೋ ಬಡ ವಿದ್ಯಾರ್ಥಿಗಳಿಗೆ ಶುಲ್ಕ ತೆತ್ತು ತರಬೇತಿ ಹೊಂದಲು ಸಾಧ್ಯವಾಗುವುದಿಲ್ಲ. ಆಗ, ಪ್ರತಿಭೆ ಕಮರಿದಂತಾಗುತ್ತದೆ. ಇಂತಹ ಅನುಭವ ನೂರಾರು ಮಂದಿಗೆ ಆಗಿದೆ.
ಸರ್ಕಾರವೇ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಿಸಿದ್ದರೆ ಉಪಯೋಗವಾಗುತ್ತಿತ್ತು ಎನ್ನುತ್ತಾರೆ ಹೆಸರು ಬಹಿರಂಗಪಡಿಸಲಿಚ್ಛಿಸದ ಪ್ರಾಂಶುಪಾಲರೊಬ್ಬರು.
ಶೀಘ್ರದಲ್ಲೇ ಸಿಗಬಹುದು...: ಪ್ರೌಢಶಾಲೆಗಳ ಶಿಕ್ಷಕರಿಗೆ ಪದವಿಪೂರ್ವ ಕಾಲೇಜುಗಳಿಗೆ ಉಪನ್ಯಾಸಕರಾಗಿ ಬಡ್ತಿ ನೀಡುವಂತೆ, ಎಂಪಿಇಡಿ ಮಾಡಿಕೊಂಡಿರುವ ದೈಹಿಕ ಶಿಕ್ಷಕರಿಗೂ ಬಡ್ತಿ ಕಲ್ಪಿಸಬೇಕು ಎಂಬ ಒತ್ತಾಯ ಹಿಂದಿನಿಂದಲೂ ಕೇಳಿಬಂದಿದೆ. ಆದರೆ, ಇದರತ್ತಲೂ ಸರ್ಕಾರ ಗಮನ ಹರಿಸಿಲ್ಲ.
ಈ ಕುರಿತು ಪ್ರತಿಕ್ರಿಯಿಸಿದ ಪದವಿಪೂರ್ವ ಹಾಗೂ ವೃತ್ತಿಶಿಕ್ಷಣ ಇಲಾಖೆ ಉಪ ನಿರ್ದೇಶಕ ರುದ್ರಮುನಿ, `ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರತ್ಯೇಕ ದೈಹಿಕ ಶಿಕ್ಷಣ ಉಪನ್ಯಾಸಕರು ಇಲ್ಲದಿರುವುದು ನಿಜ. ನಾವು, ರಾಜ್ಯ ಮತ್ತು ಜಿಲ್ಲಾಮಟ್ಟದ ಕ್ರೀಡಾಕೂಟಗಳು ನಡೆದಾಗ ಇತರೆ ಕೋಚ್ಗಳನ್ನು ಬಳಸಿಕೊಳ್ಳುತ್ತಿದ್ದೇವೆ. ಇಲಾಖೆಯಲ್ಲಿ ನೂತನವಾಗಿ ಸಿ ಅಂಡ್ ಆರ್ (ವೃಂದ ಮತ್ತು ನೇಮಕಾತಿ) ನಿಯಮಾವಳಿ ಸಿದ್ಧಪಡಿಸಲಾಗುತ್ತಿದೆ. ಇದು ಜಾರಿಯಾದ ನಂತರ ಕಾಲೇಜುಗಳಿಗೆ ದೈಹಿಕ ಶಿಕ್ಷಣ ಉಪನ್ಯಾಸಕರು ದೊರೆಯುವ ನಿರೀಕ್ಷೆ ಇದೆ` ಎಂದು ತಿಳಿಸಿದರು.
ಪ್ರಜಾವಾಣಿ ವಾರ್ತೆ
No comments:
Post a Comment