ಗಣಿತ ಪ್ರಶ್ನೆ ಪತ್ರಿಕೆ ಬಯಲಾದ ಬಗ್ಗೆ ವಿವಿಧ ಪತ್ರಿಕೆಗಳ ವರದಿಗಳು ಇಂತಿವೆ :
ಪ್ರಜಾವಾಣಿ:
ಬೆಂಗಳೂರು: ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ಮಂಗಳವಾರ (ಮಾ.20) ನಡೆಯಬೇಕಿದ್ದ ದ್ವಿತೀಯ ಪಿಯುಸಿ ಗಣಿತ ವಿಷಯದ ಪರೀಕ್ಷೆ ಯನ್ನು ಏಪ್ರಿಲ್ ಮೂರಕ್ಕೆ ಮುಂದೂ ಡಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ಘಟನೆ ಸಂಬಂಧ ಈಗಾಗಲೇ ಚಿಂತಾಮಣಿ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮಂಗಳವಾರ ನಡೆಯಬೇಕಿದ್ದ ಗಣಿತ ವಿಷಯದ ಪರೀಕ್ಷೆಯ ಪ್ರಶ್ನೆಪತ್ರಿಕೆಯು ಚಿಂತಾಮಣಿ, ಮುಳಬಾಗಿಲು, ಮಾಲೂರು ಸೇರಿದಂತೆ ಹಲವೆಡೆ ಸೋಮವಾರ ಸಂಜೆ ಬಹಿರಂಗವಾಗಿರುವ ಸುದ್ದಿ ಕೇಳಿಬಂತು. ಆದರೆ ಮಧ್ಯರಾತ್ರಿವರೆಗೂ ಇದು ಖಚಿತವಾಗಲಿಲ್ಲ.
ಬಹಿರಂಗವಾಗಿರುವ ಪ್ರಶ್ನೆಪತ್ರಿಕೆ ಮತ್ತು ಮೂಲ ಪ್ರಶ್ನೆಪತ್ರಿಕೆ ಒಂದೇ ಆಗಿರುವುದು ತೀವ್ರ ಪರಿಶೀಲನೆ ನಂತರ ಖಚಿತವಾಯಿತು ಎನ್ನಲಾಗಿದೆ.
ಏಪ್ರಿಲ್ 3ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.15ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಸೂಚಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಆ ದಿನ ಪರೀಕ್ಷೆಗೆ ಹಾಜರಾಗಬೇಕು.
ಇನ್ನೂ ಗೊತ್ತಾಗಿಲ್ಲ: ಪ್ರಶ್ನೆಪತ್ರಿಕೆ ಬಹಿರಂಗವಾಗಿದ್ದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ಪರೀಕ್ಷೆಯ ದಿನವೇ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಯಾ ತಾಲ್ಲೂಕಿನ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಹೊರ ತೆಗೆದು ಸಂಬಂಧಪಟ್ಟ ಕಾಲೇಜುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಇದೆ. ಆದರೆ ಸೋಮವಾರವೇ ಪ್ರಶ್ನೆಪತ್ರಿಕೆ ಹೇಗೆ ಹೊರಗೆ ಬಂತು ಎಂಬುದು ಅಧಿಕಾರಿಗಳಿಗೂ ಗೊತ್ತಾಗುತ್ತಿಲ್ಲ.
ಮೊದಲಿಗೆ ಚಿಂತಾಮಣಿಯ ವೆಂಕಟಾದ್ರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಶ್ನೆಪತ್ರಿಕೆ ಬಹಿರಂಗವಾಯಿತು. ಇದಾದ ನಂತರ ಮುಳಬಾಗಿಲು, ಮಾಲೂರಿನಲ್ಲೂ ಇದೇ ರೀತಿ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಿರುವುದು ಖಚಿತವಾಯಿತು ಎಂದು ಅವರು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳವಾರ ಬೆಳಗಿನ ಜಾವ ಪರೀಕ್ಷೆ ಮುಂದೂಡುವ ತೀರ್ಮಾನ ತೆಗೆದುಕೊಂಡಿತು. ಆದರೆ ಪರೀಕ್ಷೆ ಮುಂದೂಡಿರುವ ವಿಷಯ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಬರುವವರೆಗೂ ಗೊತ್ತಾಗಿರಲಿಲ್ಲ. ಇದರಿಂದಾಗಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ವಿಷಯ ಕೇಳಿ ಗಾಬರಿಗೆ ಒಳಗಾದರು.
ಕನ್ನಡ ಪ್ರಭ: ಚಿಂತಾ ಮಣಿಯಲ್ಲಿ ದೂರು ದಾಖಲು
ಕನ್ನಡ ಪ್ರಭ: ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಬಯಲು?
ಉದಯವಾಣಿ
- ಏ. 3 ರಂದು ಗಣಿತ ಪರೀಕ್ಷೆ
- Udayavani | Mar 20, 2012
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಬಯಲಾಗಿರುವ ಹಿನ್ನೆಲೆಯಲ್ಲಿ ಮಂಗಳವಾರ (ಮಾ. 20) ನಡೆಯಬೇಕಿದ್ದ ಗಣಿತ ಪರೀಕ್ಷೆಯನ್ನು ಏ.3 ಕ್ಕೆ ಮುಂದೂಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರಾದ ರಶ್ಮಿ ವಿ ಮಹೇಶ್ ತಿಳಿಸಿದ್ದಾರೆ
ಏ . 3ರಂದು ಪರೀಕ್ಷೆಯು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.15 ರವರೆಗೆ ನಡೆಯಲಿದ್ದು, ಈಗಾಗಲೇ ನಿಗದಿ ಪಡಿಸಿರುವ ಪರೀಕ್ಷಾ ಕೇಂದ್ರಗಳಲ್ಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು.
ಮಂಗಳವಾರ ನಡೆಯಬೇಕಿದ್ದ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋಮವಾರ ರಾತ್ರಿಯೇ ಕೋಲಾರ, ಮಂಡ್ಯ ಹಾಗೂ ಗುಲ್ಬರ್ಗಗಳಲ್ಲಿ ಬಹಿರಂಗಗೊಂಡಿದ್ದವು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.ಗಣಿತ ಪರೀಕ್ಷೆ ಹೊರತುಪಡಿಸಿ ಉಳಿದ ವಿಷಯದ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ, ಇಂತಹ ಪ್ರಕರಣಗಳನ್ನು ತಡೆಗಟ್ಟಲು ಮುಂದಿನ ವರ್ಷದಿಂದ ಪರೀಕ್ಷಾ ವಿಧಾನದಲ್ಲಿ ಬದಲಾವಣೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ವಿಜಯಕರ್ನಾಟಕ ಪೇಪರ್ ಕ್ಲಿಪಿಂಗ್ಸ್ ಇಲ್ಲಿವೆ

No comments:
Post a Comment