ದಾವಣಗೆರೆ: ಪರೀಕ್ಷಾ ಭಯಕ್ಕೊಳಗಾದ ಪಿಯು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ತ್ಯಾವಣಗಿ ಉಮಾಪತಿ ಅವರ ಪುತ್ರಿ ನೀತಾ (17) ಆತ್ಮಹತ್ಯೆ ಮಾಡಿಕೊಂಡವಳು. ನಗರದ ಅಮನ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಆಕೆಗೆ ಗಣಿತ ಮತ್ತು ಭೌತಶಾಸ್ತ್ರ ಪರೀಕ್ಷೆ ಕಷ್ಟವಾಗಿತ್ತು. ಇದರಿಂದ ನೊಂದ ಆಕೆ ಪೋಷಕರಲ್ಲಿ ನೋವು ತೋಡಿಕೊಂಡಿದ್ದಳು. ಪೋಷಕರು ಸಮಾಧಾನ ಹೇಳಿ ಮತ್ತೆ ಪರೀಕ್ಷೆಗೆ ಕಳುಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ತಡರಾತ್ರಿ ತಾನು ಉಳಿದುಕೊಂಡಿದ್ದ ಆಂಜನೇಯ ಬಡಾವಣೆಯ ಸಿದ್ದೇಶ್ವರ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರಂಭದಲ್ಲಿ ಸುದ್ದಿ ಹಬ್ಬಿತ್ತು. ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಮೃತ ವಿದ್ಯಾರ್ಥಿನಿಯ ಪೋಷಕರನ್ನು ಭೇಟಿಯಾಗಿ ಮಾಹಿತಿ ಪಡೆದರು. ಪ್ರಶ್ನೆಪತ್ರಿಕೆ ಸೋರಿಕೆಗೂ ವಿದ್ಯಾರ್ಥಿನಿಯ ಆತ್ಮಹತ್ಯೆಗೂ ಸಂಬಂಧವಿಲ್ಲ ಎಂದು ಪೋಷಕರು ಜಿಲ್ಲಾಧಿಕಾರಿಗೆ ಸ್ಪಷ್ಟಪಡಿಸಿದರು.
ಪರೀಕ್ಷಾ ಭಯ: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ-ಪ್ರಜಾವಾಣಿ ವಾರ್ತೆ
Improper maintenance of records and incomplete computerisation contributed to the delay in disposal of cases in the Pre-University Department
Click on this to visit Department of Technical EducationPublic Instruction
Subscribe to:
Post Comments (Atom)
No comments:
Post a Comment