Thursday, March 29, 2012

ವಿದ್ಯಾರ್ಥಿಗಳಿಗೆ ಆತಂಕ ಬೇಡ: ಸಿ.ಎಂ- ಪ್ರಜಾವಾಣಿ ವಾರ್ತೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಸರ್ಕಾರ ಕ್ರಮ ಕೈಗೊಂಡಿದೆ. ಪೋಷಕರು, ವಿದ್ಯಾರ್ಥಿಗಳು ಆತಂಕಪಡಬಾರದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮನವಿ ಮಾಡಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಂಗಳವಾರ ನೆ.ಲ.ನರೇಂದ್ರಬಾಬು ಈ ಬಗ್ಗೆ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣದ ಬಗ್ಗೆ ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿದೆ. ವಾಸ್ತವದಿಂದ ಕೂಡಿದ ವರದಿ ಬರುವ ನಿರೀಕ್ಷೆ ಇದೆ ಎಂದರು.

ದಾವಣಗೆರೆಯಲ್ಲಿ ನೀತು ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣದಿಂದಾಗಿ ಅಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಪೂರ್ಣ ಮಾಹಿತಿ ಬಂದ ನಂತರ ಅಗತ್ಯಬಿದ್ದರೆ ತನಿಖೆಗೆ ಆದೇಶಿಸಲಾಗುವುದು ಎಂದು ಭರವಸೆ ನೀಡಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಪ್ರಶ್ನೆಪತ್ರಿಕೆ ಬಹಿರಂಗದಿಂದ ಮಕ್ಕಳು ಖಿನ್ನತೆಗೆ ಒಳಗಾಗುತ್ತಾರೆ. ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರೆ ನೋವಿನ ಸಂಗತಿ. ಮಕ್ಕಳು, ಪೋಷಕರಲ್ಲಿನ ಆತಂಕವನ್ನು ನಿವಾರಿಸಬೇಕು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ಆತಂಕ ಬೇಡ: ಸಿ.ಎಂ- ಪ್ರಜಾವಾಣಿ ವಾರ್ತೆ


No comments:

Post a Comment