ಪಿಯುಸಿ ಪ್ರಶ್ನೆ ಪತ್ರಿಕೆ ಬಯಲು: ಸಿಐಡಿ ತನಿಖೆ ತೀವ್ರ
ಬೆಂಗಳೂರು: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸಿಐಡಿ ಪೊಲೀಸರು ಎಲ್ಲ ಕಡೆಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಿಐಡಿ ಡಿಜಿಪಿ ಆರ್.ಕೆ.ದತ್ತ ಅವರು ಶನಿವಾರ ಪ್ರಕರಣ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಕೆಲವೊಂದು ವಿವರಗಳನ್ನು ಪಡೆದುಕೊಂಡರು.
ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣದ ಹಿಂದೆ ದೊಡ್ಡ ಜಾಲವಿದೆ. ವಾಮಮಾರ್ಗದ ಮೂಲಕ ಹಣ ಮಾಡುವ ಮತ್ತು ಪರೀಕ್ಷಾ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಉದ್ದೇಶದಿಂದ ದುಷ್ಟಶಕ್ತಿಗಳು ಈ ರೀತಿಯ ಕೆಲಸ ಮಾಡಿದ್ದು, ಇಲಾಖೆಯ ಕೆಲ ಸಿಬ್ಬಂದಿ ಇದರಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
ಇದರ ಹಿಂದೆ ಕಾಣದ ವ್ಯಕ್ತಿಗಳ ಕೈವಾಡವಿದ್ದು, ಕೆಲ ವರ್ಷಗಳಿಂದ ಅವರು ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕೇವಲ ಪಿಯುಸಿ ಪ್ರಶ್ನೆಪತ್ರಿಕೆಗಳು ಅಷ್ಟೇ ಅಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಸಹ ಬಹಿರಂಗ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಸಿಕ್ಕಿಹಾಕಿಕೊಂಡಾಗ ಅವರನ್ನು ಬಂಧಿಸಿದರೂ, ಒತ್ತಡ ತಂದು ಕೆಲವೇ ದಿನಗಳಲ್ಲಿ ಬಿಡುಗಡೆಯಾಗುತ್ತಾರೆ. ಆ ಗುಂಪಿನವರೇ ಪಿಯುಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಬಹಿರಂಗ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಚಿಂತಾಮಣಿ, ಶ್ರೀನಿವಾಸಪುರ, ಕೋಲಾರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಿ ಮಾರಾಟವಾಗಿವೆ. ಆದರೆ ಮೊದಲು ಬೆಂಗಳೂರಿನಲ್ಲಿ ಬಹಿರಂಗವಾಗಿದ್ದು, ಇಲ್ಲಿಂದಲೇ ಬೇರೆ ಬೇರೆ ಕಡೆಗಳಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಖಜಾನೆಯಿಂದ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಅಥವಾ ಮುದ್ರಣಾಲಯದಿಂದ ಬಹಿರಂಗವಾಗಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.
ಕೈವಾಡ: ಆಯುಕ್ತರಾದ ವಿ.ರಶ್ಮಿ ಅವರು ಇಲಾಖೆಯಲ್ಲಿ ಕೆಲವೊಂದು ಸುಧಾರಣೆಗಳನ್ನು ತರುವ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರು. ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು, ಮಾನ್ಯತೆ ನವೀಕರಣ, ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮತಿ ನೀಡುವುದು, ಅರೆಕಾಲಿಕ ಉಪನ್ಯಾಸಕರ ವೇತನ ಬಿಡುಗಡೆ ಸೇರಿದಂತೆ ಎಲ್ಲವನ್ನೂ ಕಾನೂನುಬದ್ಧವಾಗಿಯೇ ಮಾಡುತ್ತಿದ್ದರು. ಅವ್ಯವಹಾರಕ್ಕೆ ಆಸ್ಪದ ನೀಡುತ್ತಿರಲಿಲ್ಲ, ಸುಳ್ಳು ಅಂಕಿಸಂಖ್ಯೆಗಳನ್ನು ನೀಡಿ ಇಲಾಖೆಯನ್ನು ದಿಕ್ಕುತಪ್ಪಿಸಲು ಖಾಸಗಿ ಸಂಸ್ಥೆಗಳಿಗೆ ಆಸ್ಪದ ಇರಲಿಲ್ಲ. ಇದು ಕೆಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಹೀಗಾಗಿ ಆಡಳಿತ ಮಂಡಳಿಗಳು ಕಾಣದ ಕೈಗಳೊಂದಿಗೆ ಷಾಮೀಲಾಗಿ ಈ ರೀತಿಯ ಕೆಲಸ ಮಾಡಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ನೋಟಿಸ್ ಪಡೆದಿರುವ ಕಾಲೇಜಿನವರು ಬಹಿರಂಗಗೊಂಡಿರುವ ಪ್ರಶ್ನೆಪತ್ರಿಕೆಗಳನ್ನು ಹಣಕ್ಕೆ ಖರೀದಿ ಮಾಡಿದ್ದಾರೆ. ಬೆಂಗಳೂರಿನಿಂದಲೇ ಎಲ್ಲ ಕಡೆಗೆ ಪ್ರಶ್ನೆಪತ್ರಿಕೆಗಳು ಹೋಗಿದ್ದು, ಇಲಾಖೆಯ ಕೆಲ ಅಧಿಕಾರಿಗಳು ಕೈಜೋಡಿಸಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಗೂಂಡಾ ಕಾಯ್ದೆಯಡಿ ಬಂಧಿಸಿ: ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಕೆಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶಿಕ್ಷಣ ಇಲಾಖೆಯ ಈಗಿರುವ ಕಾಯ್ದೆ ಪ್ರಕಾರ ಅವರಿಗೆ ಎರಡು ಸಾವಿರ ರೂಪಾಯಿ ದಂಡ, ಒಂದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಆದರೆ, ಸುಲಭವಾಗಿ ಜಾಮೀನು ಸಿಗುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರೆ ಗೂಂಡಾ ಕಾಯ್ದೆಯಡಿ ಅವರನ್ನು ಬಂಧಿಸಬೇಕು ಎಂದು ಪೋಷಕರು, ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಪಿಯುಸಿ ಪ್ರಶ್ನೆ ಪತ್ರಿಕೆ ಬಹಿರಂಗ: ಐವರ ಆಮಾನತು
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಐವರು ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಖಾಸಗಿ ಕಾಲೇಜುಗಳಿಗೆ ಮಾನ್ಯತೆ ರದ್ದುಪಡಿಸುವ ಸಂಬಂಧ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ಈಗಾಗಲೇ 14 ಉಪನ್ಯಾಸಕರನ್ನು ಅಮಾನತುಗೊಳಿಸಿ, ನಾಲ್ಕು ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ. ಇದರ ಮುಂದುವರಿದ ಭಾಗವಾಗಿ ಚಿಂತಾಮಣಿಯ ವಿಜಯ ಮತ್ತು ಕೋಲಾರದ ಸಹ್ಯಾದ್ರಿ ಪದವಿ ಪೂರ್ವ ಕಾಲೇಜಿಗೂ ಶನಿವಾರ ನೋಟಿಸ್ ನೀಡಲಾಗಿದೆ.
ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೌತವಿಜ್ಞಾನ ಉಪನ್ಯಾಸಕ ಎನ್.ಮುನಿಕೃಷ್ಣಪ್ಪ, ಜೀವವಿಜ್ಞಾನ ಉಪನ್ಯಾಸಕ ಎ.ಮಂಜುನಾಥ್, ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಜೀವವಿಜ್ಞಾನ ವಿಷಯದ ಉಪನ್ಯಾಸಕರಾದ ಕೆ.ಎನ್.ಮಂಜುನಾಥ ರೆಡ್ಡಿ, ಶ್ರೀನಿವಾಸಪ್ಪ, ಚಿಂತಾಮಣಿಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಉಬೇದುಲ್ಲಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ರಶ್ಮಿ ಅವರು `ಪ್ರಜಾವಾಣಿ`ಗೆ ತಿಳಿಸಿದರು.
ಪಿಯುಸಿ ಪ್ರಶ್ನೆ ಪತ್ರಿಕೆ ಬಯಲು: ಸಿಐಡಿ ತನಿಖೆ, 14 ಉಪನ್ಯಾಸಕರ ಸಸ್ಪೆಂಡ್
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಪ್ರಶ್ನೆಪತ್ರಿಕೆಗಳು ಬಹಿರಂಗವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ವಿವಿಧ ಸರ್ಕಾರಿ ಕಾಲೇಜುಗಳ 14 ಉಪನ್ಯಾಸಕರನ್ನು ಅಮಾನತುಗೊಳಿಸಿದೆ.
![]() |
![]() |
ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣದ ಹಿಂದೆ ವ್ಯವಸ್ಥಿತ ಜಾಲ ಇರುವ ಸಂಶಯದ ಹಿನ್ನೆಲೆಯಲ್ಲಿ ಗುರುವಾರ ಸಿಐಡಿ ತನಿಖೆ ಆರಂಭವಾಗಿದ್ದು, ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಸೋಮವಾರ ಗಣಿತ ವಿಷಯದ ಪ್ರಶ್ನೆಪತ್ರಿಕೆ ಬಹಿರಂಗವಾದ ಪ್ರಕರಣದಲ್ಲಿ ಭಾಗಿಯಾಗಿದ್ದ ಚಿಂತಾಮಣಿಯ ಮೂರು ಮತ್ತು ಚಿಕ್ಕಬಳ್ಳಾಪುರದ ಒಂದು ಖಾಸಗಿ ಪದವಿ ಪೂರ್ವ ಕಾಲೇಜಿಗೆ ಮಾನ್ಯತೆ ರದ್ದುಪಡಿಸುವ ಸಂಬಂಧ ಷೋಕಾಸ್ ನೋಟಿಸ್ ನೀಡಲಾಗಿದೆ.
ಘಟನೆ ಸಂಬಂಧ ಚಿಂತಾಮಣಿಯಲ್ಲಿ ಪ್ರದೀಪ್ ಮತ್ತು ವೆಂಕಟೇಶ್ ಎಂಬುವರನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಈಶ್ವರ್ ನಾಪತ್ತೆಯಾಗಿದ್ದಾನೆ. ಪ್ರದೀಪ್ ಜೆರಾಕ್ಸ್ ಅಂಗಡಿ ಮಾಲೀಕ. ವೆಂಕಟೇಶ್ ತಂಗಿ ಪಿಯುಸಿ ಓದುತ್ತಿದ್ದು, ಆಕೆಗೆ ಪ್ರಶ್ನೆಪತ್ರಿಕೆ ಪಡೆಯಲು ವೆಂಕಟೇಶ್ ಜೆರಾಕ್ಸ್ ಅಂಗಡಿಗೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದಲ್ಲದೆ ಅಶ್ವತ್ಥ ನಾರಾಯಣ, ರಂಜಿತ್ ಹಾಗೂ ಸುದರ್ಶನ ಎಂಬುವರನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಗುರುವಾರ ನಗರದಲ್ಲಿ ಬಂಧಿಸಿದ್ದಾರೆ. ಆರೋಪಿಗಳು ಪ್ರಶ್ನೆ ಪತ್ರಿಕೆಗಳನ್ನು ಸರಬರಾಜು ಮಾಡಿದ್ದು, ಪ್ರತಿ ಪ್ರಶ್ನೆ ಪತ್ರಿಕೆಯನ್ನು 40 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ ತರೀಕೆರೆ ತಾಲ್ಲೂಕು ಅಜ್ಜಂಪುರ ಹೋಬಳಿ ಕುಡ್ಲೂರು ಪ್ರಾಥಮಿಕ ಶಾಲೆ ಶಿಕ್ಷಕ ಸಿದ್ರಾಮಪ್ಪ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಚಿಂತಾಮಣಿಯ ವೆಂಕಟಾದ್ರಿ, ರಾಯಲ್, ಪ್ರಗತಿ ಪದವಿ ಪೂರ್ವ ಕಾಲೇಜು ಮತ್ತು ಚಿಕ್ಕಬಳ್ಳಾಪುರದ ಶಾಂತಿನಿಕೇತನ ಪದವಿ ಪೂರ್ವ ಕಾಲೇಜಿಗೆ ನೋಟಿಸ್ ನೀಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ರಶ್ಮಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತುಮಕೂರು, ಶ್ರೀನಿವಾಸಪುರ, ಬೆಂಗಳೂರಿನ ಯಲಹಂಕ ನ್ಯೂಟೌನ್, ನಾಗರಬಾವಿ ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಭೌತ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ಆ ವಿಷಯದ ಪರೀಕ್ಷೆಯನ್ನು ಇಲಾಖೆ ಮುಂದೂಡಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಗಣಿತ ವಿಷಯದ ಪ್ರಶ್ನೆಪತ್ರಿಕೆ ಬಹಿರಂಗಗೊಂಡ ಬೆನ್ನಲ್ಲೇ ಭೌತವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಯೂ ಬಹಿರಂಗವಾಗಿರುವುದರಿಂದ ಪೋಷಕರು, ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಪ್ರಶ್ನೆಪತ್ರಿಕೆ ಬಹಿರಂಗವಾಗಿರುವುದು ಮತ್ತು ಪರೀಕ್ಷೆ ಮುಂದೂಡಿರುವುದನ್ನು ಖಂಡಿಸಿ ಗುರುವಾರ ಹಲವೆಡೆ ಪ್ರತಿಭಟನೆಗಳು ನಡೆದಿವೆ.
ಹಿಂದಿನ ವರ್ಷಗಳ ಹಾಗೆ ಈ ವರ್ಷವೂ ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇಷ್ಟಾದರೂ ಪ್ರಶ್ನೆಪತ್ರಿಕೆಗಳು ಹೇಗೆ ಬಹಿರಂಗವಾದವು ಎಂಬುದು ಇನ್ನೂ ಗೊತ್ತಾಗಿಲ್ಲ. ತನಿಖೆಯ ನಂತರವೇ ಸ್ಪಷ್ಟ ಉತ್ತರ ದೊರೆಯಲು ಸಾಧ್ಯ ಎಂದು ಅವರು ಉತ್ತರಿಸಿದರು.
ಗಣಿತ ವಿಷಯದ ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ವೆಂಕಟಾದ್ರಿ ಕಾಲೇಜಿಗೆ ಗುರುವಾರ ತಂಡವೊಂದನ್ನು ಕಳುಹಿಸಲಾಗಿತ್ತು. ತಂಡದ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಕಾಲೇಜುಗಳ ಉಪನ್ಯಾಸಕರು, ಖಾಸಗಿ ಕಾಲೇಜುಗಳಲ್ಲಿ ಪಾಠ ಮಾಡುತ್ತಿರುವುದಲ್ಲದೆ, ಪ್ರಶ್ನೆಪತ್ರಿಕೆ ಬಹಿರಂಗವಾಗಲು ಕಾರಣರಾಗಿದ್ದಾರೆ ಎಂಬ ಮಾಹಿತಿ ಇದೆ. ತನಿಖೆ ನಂತರವೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದರು.
ತನಿಖೆ ಆರಂಭ:ಸರ್ಕಾರದ ಸೂಚನೆಯಂತೆ ಗುರುವಾರ ಸಿಐಡಿ ತನಿಖೆ ಆರಂಭವಾಗಿದೆ. ಒಟ್ಟು ಐದು ತಂಡಗಳನ್ನು ರಚಿಸಲಾಗಿದ್ದು, ಸಂಶಯದ ಮೇಲೆ ಕೆಲ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೋಮವಾರದ ಒಳಗೆ ಸುಳಿವು ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಕಾರ್ಯದರ್ಶಿ ಎಸ್.ವಿ.ರಂಗನಾಥ್ ಅವರು ಗುರುವಾರ ಬೆಳಿಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಆಯುಕ್ತರಾದ ವಿ.ರಶ್ಮಿ ಅವರೊಂದಿಗೆ ಪ್ರಶ್ನೆಪತ್ರಿಕೆ ಬಹಿರಂಗವಾಗಿರುವುದು, ಮುಂದೆ ಈ ರೀತಿ ಆಗುವುದನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಕಾಡುತ್ತಿರುವ ಪ್ರಶ್ನೆ: ಪ್ರಶ್ನೆಪತ್ರಿಕೆಗಳು ಮುದ್ರಣವಾಗುವ ಸ್ಥಳದಲ್ಲಿ ಅಥವಾ ಖಜಾನೆಯಲ್ಲಿ ಮಾತ್ರ ಬಹಿರಂಗವಾಗಲು ಸಾಧ್ಯ. ಯಾವ ಕಡೆಯಿಂದ ಬಹಿರಂಗವಾಯಿತು ಎಂಬ ಪ್ರಶ್ನೆ ಕಾಡುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ಆರೋಪಿಗಳಾದ ಪುಟ್ಟರಾಜು, ನವೀನ್ ಕುಮಾರ್, ಅಜಯ್ ಕುಮಾರ್ ಮತ್ತು ಶಶಿಕಲಾ ತಲೆಮರೆಸಿಕೊಂಡಿದ್ದಾರೆ. ಗಿರಿನಗರ ಹಾಗೂ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಉದಯವಾಣಿ
- ಪಿಯುಸಿ ಪ್ರಶ್ನೆ ಪತ್ರಿಕೆ ಬಯಲು
- Udayavani | Mar 24, 2012
ಬೆಂಗಳೂರು: ಪಿಯುಸಿ ಪ್ರಶ್ನೆ ಪತ್ರಿಕೆ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಪಿಯು ಕಾಲೇಜಿನ ಆರು ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ.
ಪ್ರಶ್ನೆ ಪತ್ರಿಕೆ ಬಯಲು ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರ ವರದಿ ಆಧಾರದ ಮೇಲೆ ಆರು ಉಪನ್ಯಾಸಕರನ್ನು ಅಮಾನತು ಮಾಡಿ ಪದವಿಪೂರ್ವ ಶಿಕ್ಷಣ ಇಲಾಖೆ ಆಯುಕ್ತರಾದ ವಿ. ರಶ್ಮಿ ಆದೇಶ ಹೊರಡಿಸಿದ್ದಾರೆ. ಕೋಲಾರ ಜಿಲ್ಲೆಯ ಉಪ ನಿರ್ದೇಶಕರಿಗೆ ಈ ಸಂಬಂಧ ಪತ್ರ ರವಾನಿಸಿದ್ದಾರೆ.
ಗುರುವಾರವಷ್ಟೇ 14 ಉಪನ್ಯಾಸಕರನ್ನು ಅಮಾನತು ಮಾಡಿ ನಾಲ್ಕು ಕಾಲೇಜುಗಳ ಮಾನ್ಯತೆ ರದ್ದುಪಡಿಸಲಾಗಿತ್ತು. ಮುಂದುವರಿದ ಭಾಗವಾಗಿ ಮತ್ತೆ ಆರು ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ.
ಈ ಮಧ್ಯೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರಾದ ರಶ್ಮಿ ಮಹೇಶ್ ಅವರನ್ನು ಬೆಂಬಲಿಸಿ ರಾಜ್ಯಾದ್ಯಂತ ವಿದ್ಯಾರ್ಥಿಗಳು ಎಸ್ಎಂಎಸ್ ಅಭಿಯಾನ ಹಮ್ಮಿಕೊಂಡಿದ್ದಾರೆ.
ಮೊಬೈಲ್ ಫೋನ್ಗಳಲ್ಲಿ ರಶ್ಮಿ ಮಹೇಶ್ ಅವರನ್ನು ಬೆಂಬಲಿಸಿರುವ ಎಸ್ಎಂಎಸ್ಗಳು ಹರಿದಾಡುತ್ತಿದ್ದು, 'ರಶ್ಮಿ ಅವರು ದಕ್ಷ, ಪ್ರಾಮಾಣಿಕ ಅಧಿಕಾರಿ. ಅವರ ಅಧಿಕಾರವಧಿಯಲ್ಲಿ ಮಂಡಳಿ ಉತ್ತಮ ಕೆಲಸ ಮಾಡುತ್ತಿದೆ. ಪ್ರಶ್ನೆ ಪತ್ರಿಕೆ ಬಯಲು ಪ್ರಕರಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಅವರನ್ನು ಬಲಿಪಶು ಮಾಡುತ್ತಿದೆ. ಅವರ ಒತ್ತಡಕ್ಕೆ ಮಣಿದು ರಶ್ಮಿ ಆವರನ್ನು ವರ್ಗಾವಣೆ ಮಾಡಿದರೆ ಹೋರಾಟ ನಡೆಸಲಾಗುವುದು' ಎಂಬ ಎಚ್ಚರಿಕೆಯನ್ನೂ ಎಸ್ಎಂಎಸ್ ಸಂದೇಶದ ಮೂಲಕ ನೀಡುತ್ತಿದ್ದಾರೆ.
- ಪಿಯುಸಿಗೆ ಕ್ಲಸ್ಟರ್ ಪದ್ಧತಿ ಜಾರಿಗೆ ಎಂದು?
- Udayavani | Mar 24, 2012
ಕಲಬುರ್ಗಿ: ದಿನಕ್ಕೊಂದು ಪ್ರಶ್ನೆ ಪತ್ರಿಕೆ ಬಹಿರಂಗಗೊಂಡರೆ ಪರೀಕ್ಷೆ ನಡೆಸೋದು ಹೇಗೆ?... ಇದು ಸದ್ಯ ಪಿಯು ಪರೀಕ್ಷಾ ಮಂಡಳಿ ಹಾಗೂ ಶಿಕ್ಷಣ ತಜ್ಞರನ್ನು ಕಾಡುತ್ತಿರುವ ಪ್ರಶ್ನೆ.
ಪ್ರಶ್ನೆಪತ್ರಿಕೆ ಬಹಿರಂಗಗೊಳ್ಳಲು ಪಿಯು ಮಂಡಳಿ ನಿರ್ಲಕ್ಷéದ ಜತೆಗೆ ಹಲವು ಕಾರಣಗಳಿರಬಹುದು. ಆ ಹಲವು ಕಾರಣಗಳಲ್ಲಿ ಕಳೆದ ಮೂರು ವರ್ಷಗಳಿಂದ ಜಾರಿಗೊಳಿಸಬೇಕೆಂದಿರುವ ಕ್ಲಸ್ಟರ್ ಪದ್ಧತಿ ಅಳವಡಿಸದೇ ಇರುವುದೂ ಒಂದು. ಪಿಯುಸಿ ಪರೀಕ್ಷೆಗೂ ಕ್ಲಸ್ಟರ್ ಪದ್ಧತಿ ಜಾರಿ ತಂದರೆ ಪರೀಕ್ಷೆಯಲ್ಲಿ ಕಠಿಣತೆ ತರಬಹುದಲ್ಲದೇ ಸಾಮೂಹಿಕ ನಕಲು ತಡೆಯುವುದರ ಜತೆಗೆ ಪ್ರಶ್ನೆ ಪತ್ರಿಕೆ ಬಹಿರಂಗಕ್ಕೂ ಕಡಿವಾಣ ಹಾಕಬಹುದಾಗಿದೆ. ಆಯಾ ಕಾಲೇಜು ಸಂಸ್ಥೆಗಳು ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಪ್ರಶ್ನೆಪತ್ರಿಕೆಗಳನ್ನು ಬಹಿರಂಗಗೊಳಿಸುತ್ತಿದ್ದಾರೆ. ಆದರೆ ಒಂದು ಕಾಲೇಜಿನ ವಿದ್ಯಾರ್ಥಿಗಳು ನೂರಾರು ಕಾಲೇಜುಗಳಿಗೆ ಹಂಚಿ ಹೋದರೆ ಪ್ರಶ್ನೆ ಪತ್ರಿಕೆ ಬಹಿರಂಗಪಡಿಸಿದರೂ ವಿದ್ಯಾರ್ಥಿಗಳಿಗೆ ಗೌಪ್ಯವಾಗಿ ತಲುಪಿಸಲು ಸಾಧ್ಯವಿಲ್ಲ. ಈಗ ಆಯಾ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯುತ್ತಿರುವುದರಿಂದ ಪ್ರಶ್ನೆ ಪತ್ರಿಕೆ ಬಹಿರಂಗ ಎಂಬ ಎಡವಟ್ಟಿಗೆ ಕಾರಣವಾಗುತ್ತಿದೆ.
ಪ್ರಶ್ನೆ ಪತ್ರಿಕೆ ಬಹಿರಂಗಕ್ಕೆ ಕಾರಣರಾದ ಉಪನ್ಯಾಸಕರನ್ನು ಅಮಾನತು ಮಾಡಿರಬಹುದು ಲಕ್ಷಾಂತರ ವಿದ್ಯಾರ್ಥಿಗಳ ಆತಂಕ ಕೊನೆಗೊಳ್ಳುವುದೇ ಕಠಿಣ ಪರಿಶ್ರಮದಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪರೀಕ್ಷೆಗೆ ತಯಾರಾಗುತ್ತಾರೆ. ಆದರೆ ಹೀಗೆ ದಿಢೀರನೇ ಪ್ರಶ್ನೆಪತ್ರಿಕೆ ಬಹಿರಂಗಗೊಂಡು ಪರೀಕ್ಷೆ ಮುಂದೂಡಿದರೆ ಆಗುವ ಅನಾಹುತಗಳಿಗೆ ಯಾರು ಜವಾಬ್ದಾರರು? ಮರು ಪರೀಕ್ಷೆ ನಡೆಸಿದರೆ ಜವಾಬ್ದಾರಿ ಮುಗಿಯಿತೇ? ಎಂದು ವಿದ್ಯಾರ್ಥಿಗಳು ಹಾಗೂ ಪಾಲಕರು ಕೇಳುತ್ತಿದ್ದಾರೆ.
ಎಸ್.ಎಸ್.ಎಲ್.ಸಿ, ಬಿ.ಎಡ್, ಡಿ.ಎಡ್. ಎಂ.ಎಡ್ ಸೇರಿದಂತೆ ಇತರೆ ಎಲ್ಲ ಪರೀಕ್ಷೆಗಳಿಗೆ ಕ್ಲಸ್ಟರ್ ಪದ್ಧತಿ ಅಳವಡಿಸಲಾಗಿದೆ. ಆದರೆ, ಪಿಯುಸಿಗೆ ಮಾತ್ರ ಕ್ಲಸ್ಟರ್ ಪದ§ತಿಯಲ್ಲಿ ಪರೀಕ್ಷೆ ನಡೆಸಲು ಮುಂದಾಗುತ್ತಿಲ್ಲ.
ಕ್ಲಸ್ಟರ್ ಎಂದರೇನು?: ಒಂದು ಕಾಲೇಜಿನ ವಿದ್ಯಾರ್ಥಿಗಳನ್ನು ಅಲ್ಫಾಬಿಟ್ಸ್ ಪ್ರಕಾರ ವಿವಿಧ ಪರೀûಾ ಕೇಂದ್ರಗಳಿಗೆ ಹಂಚುವುದೇ ಕ್ಲಸ್ಟರ್ ಪದ್ಧತಿ. ಈ ಪದ್ಧತಿಯಡಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪರೀಕ್ಷಾ ಕೇಂದ್ರಗಳನ್ನು ಹೊರತುಪಡಿಸಿ ಬೇರೇ ಬೇರೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಾಗುತ್ತದೆ.
ಈ ಕ್ಲಸ್ಟರ್ ಪದ್ಧತಿ ಪರೀಕ್ಷೆಯಿಂದ ಸಾಮೂಹಿಕ ನಕಲು ತಡೆಯಬಹುದಾಗಿದೆ. ನಕಲು ತಡೆಯಲು ಹಾಗೂ ಪರೀಕ್ಷೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕ್ಲಸ್ಟರ್ ಪದ್ಧತಿ ಜಾರಿಗೆ ತರಲಾಗಿದೆ.
ಕ್ಲಸ್ಟರ್ ಪದ್ಧತಿ ಅಳವಡಿಸಿದರೆ ಪ್ರತಿಷ್ಠಿತ ಕಾಲೇಜು ಹಾಗೂ ಸರಕಾರಿ ಕಾಲೇಜು ಎಂಬ ಭೇದಭಾವವಿಲ್ಲದೆ ಎಲ್ಲ ವಿದ್ಯಾರ್ಥಿಗಳನ್ನು ಸಮೀಕರಣಗೊಳಿಸಬಹುದಾಗಿದೆ. ಈ ಪದ್ಧತಿ ಜಾರಿಗೆ ಬಂದರೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಸಹ ಸರಕಾರಿ ಕಾಲೇಜಿನ ಪರೀûಾ ಕೇಂದ್ರದಲ್ಲಿ ಹಾಗೂ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿದಂತಾಗುತ್ತದೆ.
ಜಾರಿಗೆ ಹಿಂದೇಟು ಏಕೆ?
ಪ್ರತಿಷ್ಠಿತ ಕಾಲೇಜುಗಳ ಆಡಳಿತ ಮಂಡಳಿಗಳ ಒತ್ತಡವೇ ಇದಕ್ಕೆ ಕಾರಣವೆಂದು ಹೇಳಲಾಗಿದೆ.
ಪಿಯುಸಿಗೆ ಕ್ಲಸ್ಟರ್ ಪದ್ಧತಿ ಜಾರಿಗೆ ತಂದರೆ ತಮ್ಮ ಸಂಸ್ಥೆಯ ಕಾಲೇಜಿನ ಫಲಿತಾಂಶ ಕುಂಠಿತವಾಗುವುದೆಂಬ ಭೀತಿಯ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜಿನ ಪಿಯುಸಿ ಕಾಲೇಜಿನ ಆಡಳಿತ ಮಂಡಳಿಗಳು ಸರಕಾರದ ಮೇಲೆ ಒತ್ತಡ ತಂದು ಕ್ಲಸ್ಟರ್ ಪದ್ಧತಿ ಜಾರಿಯಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಮುಂದಿನ ವರ್ಷ ಜಾರಿ
ಪ್ರಶ್ನೆಪತ್ರಿಕೆ ಬಹಿರಂಗಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ತುರ್ತುಸಭೆ ಸೇರಿದ ಪಿಯು ಆಡಳಿತ ಮಂಡಳಿಯ ನಿರ್ದೇಶಕರು, ಮುಂದಿನ ವರ್ಷದಿಂದ ಕಡ್ಡಾಯವಾಗಿ ಕ್ಲಸ್ಟರ್ ಪದ್ಧತಿ ಪರೀಕ್ಷೆ ಜಾರಿ ತರುವ ಬಗ್ಗೆ ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪರೀಕ್ಷೆ ಮೇಲೆ ಹಿಡಿತ ಸಾಧಿಸಲು ಈ ಪದ್ಧತಿ ಜಾರಿ ತರುವುದು ಅನಿವಾರ್ಯ ಎಂದು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಗಟ್ಟಿಯಾಗಿ ಹೇಳಿದ್ದಕ್ಕೆ ಸಭೆಯಲ್ಲಿ ಇದ್ದ ಇತರರು ಬೆಂಬಲ ಸೂಚಿಸಿದರು ಎಂದು ವರದಿಯಾಗಿದೆ. ಮುಂದಿನ ವರ್ಷ ಕ್ಲಸ್ಟರ್ ಪದ್ಧತಿ ಜಾರಿ ಬರುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.
ಡೆಕ್ಕನ್ ಹೆರಾಲ್ಡ್An attempt to cripple PU exam system
Muthi-ur-Rahman Siddiqui, Bangalore, Mar 22, 2012, DHNS :The leak of the Mathematics and Physics papers within a span of three days is being suspected to be part of a pre-meditated design to cripple the Department of Pre-University Education’s (DPUE) existing examination system.
This is for the first time in its history that the DPUE, which will have to adopt the National Curriculum Framework (NCF) for I PU Science stream from next year, faces a serious crisis of credibility.
Once the Physics paper was leaked and the manner in which all three sets were distributed -- in some places free of cost — raised doubts among DPUE officials that it could be the work of private colleges acting in tandem with some of its own staff to scuttle the NCF. “This is being suspected to be one of the motivating factors for the network to leak the two papers within a span of three days,” an official said.
A powerful lobby, comprising officials from some private colleges, a platform of businessmen owning companies that publish/print PU-level textbooks and some private coaching institutes are being suspected to have engineered the leaks in their bid to defeat the NCF’s implementation.
The lobby is peeved at Rashmi V Mahesh, Commissioner, DPUE, for many reasons. The adoption of the NCF for I PUC Science is one of them. The NCF’s adoption will severely damage the interests of private colleges and coaching centres. A uniform syllabus will mean students will not have to pay separately for various entrance examinations.
What’s more, there are reports of the leakage of all four core subjects in the science stream. The Biology paper, held on March 16, is also suspected to have been leaked. The DPUE, however, has denied it.
This year’s II PUC examination may go down in history as one of the most embarrassing for the DPUE. But is the DPUE so incompetent that it cannot guard the question papers of one of the most important examination of a student’s career?
It is not. Rashmi has raised doubts about the motive of the scamsters. “They are not after money. Why else would the leaked question papers be distributed free to the students? The entire system is the target,” she said.
If well-placed sources are to be believed, the scamsters want to oust Rashmi. The involvement of private college lobby has not been ruled out. That the leaked papers were being distributed at private colleges and coaching institutes only leads credence to this suspicion.
Besides, the textbook lobby is angry. The NCF will ensure there is a single textbook for all PUC streams. So, the multiple textbooks will vanish from the market.
The introduction of online counselling for admission to undergraduate courses is another thorn in the private colleges’ flesh.
Sources privy to the development said that the finger was now being pointed at Rashmi and her credibility is at stake.- ಡಿ
No comments:
Post a Comment