ಬೆಂಗಳೂರು: `ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಪಟ್ಟಂತೆ ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸಬೇಕು` ಎಂದು ಖಾಸಗಿ ಕಾಲೇಜುಗಳ ನಿರ್ವಹಣಾ ಸಂಘವು ಆಗ್ರಹಿಸಿದೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಕೆ.ಪಾಂಡುರಂಗ ಶೆಟ್ಟಿ, `ಖಾಸಗಿ ವಿದ್ಯಾಶಾಲೆಗಳಿಗೆ ಸಂಬಂಧಿಸಿದಂತೆ ಪಿಯು ಕಾಲೇಜುಗಳ ಪ್ರವೇಶ, ಅರ್ಜಿ ಶುಲ್ಕ, ಪೀಠಿಕೆ ಪುಸ್ತಕ, ಪ್ರವೇಶ ಶುಲ್ಕ, ಮೀಸಲಾತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ಈ ಆದೇಶ ಖಾಸಗಿ ವಿದ್ಯಾಸಂಸ್ಥೆಗಳ ಹಕ್ಕುಗಳನ್ನೇ ಕಿತ್ತುಕೊಳ್ಳುವಂತಹುದಾಗಿದೆ` ಎಂದರು.
`ಖಾಸಗಿ ವಿದ್ಯಾಸಂಸ್ಥೆಗಳು ಕಾನೂನುಬದ್ಧವಾಗಿ ತನ್ನದೇ ಆದಂತಹ ದಾಖಲಾತಿ ಪ್ರಕ್ರಿಯೆ, ನಿಯಮಾವಳಿ ಹೊಂದಿದ್ದು, ಅದರಂತೆ ಜಾಹೀರಾತು ಅಧಿಸೂಚನೆಗಳನ್ನು ಹೊರಡಿಸುವ ಮೂಲಕ ಪಾರದರ್ಶಕವಾಗಿದೆ. ಬಹುಪಾಲು ಮೆರಿಟ್ ಆಧಾರಿತವಾಗಿ ಸ್ಥಳೀಯ ಪ್ರದೇಶದ ವಿದ್ಯಾರ್ಥಿಗಳಿಗೆ ಸೀಮಿತಗೊಂಡಿದೆ. ಸರ್ಕಾರವು ಈ ವಿಷಯಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸಲು ಬರುವುದಿಲ್ಲ` ಎಂದರು.
`ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನಿನ ನಿಯಮಗಳಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯು ನೋಡುವ ದೃಷ್ಟಿಕೋನವು ದೋಷಪೂರಿತವಾಗಿದೆ. ಆದ್ದರಿಂದ ಇಲಾಖೆಯು ಮೌಲ್ಯಾಧಾರಿತ ಶಿಕ್ಷಣ ಹಾಗೂ ಉಚ್ಚಮಟ್ಟದ ಸೇವೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಆದ್ದರಿಂದ ಈ ಸುತ್ತೋಲೆಯನ್ನು ತಕ್ಷಣಕ್ಕೆ ಹಿಂಪಡೆಯಬೇಕು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಇಲಾಖೆಯೇ ಸಂಪೂರ್ಣ ಜವಾಬ್ದಾರಿಯಾಗುತ್ತದೆ` ಎಂದರು.
`ಮೇ 24 ರಂದು ಎಲ್ಲ ಖಾಸಗಿ ವಿದ್ಯಾಸಂಸ್ಥೆಗಳು ಸಭೆ ಸೇರಿ ಚರ್ಚೆ ನಡೆಸಲಾಗುವುದು. ಆ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು` ಎಂದು ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಕೆ.ಪಾಂಡುರಂಗ ಶೆಟ್ಟಿ, `ಖಾಸಗಿ ವಿದ್ಯಾಶಾಲೆಗಳಿಗೆ ಸಂಬಂಧಿಸಿದಂತೆ ಪಿಯು ಕಾಲೇಜುಗಳ ಪ್ರವೇಶ, ಅರ್ಜಿ ಶುಲ್ಕ, ಪೀಠಿಕೆ ಪುಸ್ತಕ, ಪ್ರವೇಶ ಶುಲ್ಕ, ಮೀಸಲಾತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ಈ ಆದೇಶ ಖಾಸಗಿ ವಿದ್ಯಾಸಂಸ್ಥೆಗಳ ಹಕ್ಕುಗಳನ್ನೇ ಕಿತ್ತುಕೊಳ್ಳುವಂತಹುದಾಗಿದೆ` ಎಂದರು.
`ಖಾಸಗಿ ವಿದ್ಯಾಸಂಸ್ಥೆಗಳು ಕಾನೂನುಬದ್ಧವಾಗಿ ತನ್ನದೇ ಆದಂತಹ ದಾಖಲಾತಿ ಪ್ರಕ್ರಿಯೆ, ನಿಯಮಾವಳಿ ಹೊಂದಿದ್ದು, ಅದರಂತೆ ಜಾಹೀರಾತು ಅಧಿಸೂಚನೆಗಳನ್ನು ಹೊರಡಿಸುವ ಮೂಲಕ ಪಾರದರ್ಶಕವಾಗಿದೆ. ಬಹುಪಾಲು ಮೆರಿಟ್ ಆಧಾರಿತವಾಗಿ ಸ್ಥಳೀಯ ಪ್ರದೇಶದ ವಿದ್ಯಾರ್ಥಿಗಳಿಗೆ ಸೀಮಿತಗೊಂಡಿದೆ. ಸರ್ಕಾರವು ಈ ವಿಷಯಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸಲು ಬರುವುದಿಲ್ಲ` ಎಂದರು.
`ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನಿನ ನಿಯಮಗಳಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯು ನೋಡುವ ದೃಷ್ಟಿಕೋನವು ದೋಷಪೂರಿತವಾಗಿದೆ. ಆದ್ದರಿಂದ ಇಲಾಖೆಯು ಮೌಲ್ಯಾಧಾರಿತ ಶಿಕ್ಷಣ ಹಾಗೂ ಉಚ್ಚಮಟ್ಟದ ಸೇವೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಆದ್ದರಿಂದ ಈ ಸುತ್ತೋಲೆಯನ್ನು ತಕ್ಷಣಕ್ಕೆ ಹಿಂಪಡೆಯಬೇಕು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಇಲಾಖೆಯೇ ಸಂಪೂರ್ಣ ಜವಾಬ್ದಾರಿಯಾಗುತ್ತದೆ` ಎಂದರು.
`ಮೇ 24 ರಂದು ಎಲ್ಲ ಖಾಸಗಿ ವಿದ್ಯಾಸಂಸ್ಥೆಗಳು ಸಭೆ ಸೇರಿ ಚರ್ಚೆ ನಡೆಸಲಾಗುವುದು. ಆ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು` ಎಂದು ಹೇಳಿದರು.
No comments:
Post a Comment