Saturday, May 26, 2012

ಸರ್ಕಾರ ಶುಲ್ಕವನ್ನು ಪರಿಷ್ಕರಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಎಚ್ಚರಿಕೆ

ಬೆಂಗಳೂರು: ಪಿಯುಸಿ ಪ್ರವೇಶಕ್ಕೆ ನಿಗದಿಪಡಿಸಿರುವ ಶುಲ್ಕ ಅವೈಜ್ಞಾನಿಕವಾಗಿದೆ. ಸರ್ಕಾರ ಕೂಡಲೇ ಶುಲ್ಕವನ್ನು ಪರಿಷ್ಕರಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

`ಶುಲ್ಕ ನಿಗದಿ ಸಂಬಂಧ ಸರ್ಕಾರ ಇದೇ 11ರಂದು ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ. ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಒಪ್ಪುವ ಪ್ರಶ್ನೆಯೇ ಇಲ್ಲ` ಎಂದು ಒಕ್ಕೂಟದ ಅಧ್ಯಕ್ಷ ಎಂ.ಕೆ.ಪಾಂಡುರಂಗ ಶೆಟ್ಟಿ ಅವರು `ಪ್ರಜಾವಾಣಿ`ಗೆ ತಿಳಿಸಿದರು.



ಪಿಯುಸಿ ಪ್ರವೇಶ ಶುಲ್ಕ ಪರಿಷ್ಕರಣೆಗೆ ಆಗ್ರಹ



No comments:

Post a Comment